ವಿಷ್ಣುವರ್ಧನ್ ಓದಿದ ಶಾಲೆ ಮುಚ್ಚಲು ಸಿದ್ಧತೆ- ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ

Public TV
1 Min Read

ಬೆಂಗಳೂರು: ಕನ್ನಡ ಶಾಲೆಗಳನ್ನು ಮುಚ್ಚಲ್ಲ ಅಂತಾ ಬಡಾಯಿ ಕೊಚ್ಚಿಕೊಳ್ಳೋ ಸರ್ಕಾರ ಇದೀಗ ನಟ ವಿಷ್ಣುವರ್ಧನ್ ಓದಿದ ಶಾಲೆಯನ್ನೇ ಮುಚ್ಚಲು ಹೊರಟಿದೆ.

ಚಾಮರಾಜಪೇಟೆಯಲ್ಲಿರೋ ಸರ್ಕಾರಿ ಅನುದಾನಿತ ಮಾಡಲ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿಯಲು ಸರ್ಕಾರ ಮುಂದಾಗಿದೆ. ಈ ಹಿಂದೆ ಈ ಶಾಲೆಗೆ ಸೇರಬೇಕಾದ್ರೆ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರಬೇಕಿತ್ತು ಅಥವಾ ರಾಜಕಾರಣಿಗಳ ರೆಕಮೆಂಡ್ ಬೇಕಿತ್ತು.

ಈ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು, ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಹಲವು ಬಾರಿ ಶಿಕ್ಷಕರನ್ನು ನೇಮಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದ್ರೂ ಸರ್ಕಾರ ಶಿಕ್ಷಕರ ನೇಮಕಕ್ಕೆ ಮುಂದಾಗದ ಕಾರಣ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. 2 ತಿಂಗಳ ಹಿಂದೆ ಪ್ರೌಢಶಾಲೆಯನ್ನು ಮುಚ್ಚಿದ್ದ ಸರ್ಕಾರ ಈಗ ಮಕ್ಕಳ ಕೊರತೆಯನ್ನೇ ನೆಪವಾಗಿಟ್ಟುಕೊಂಡು ಪ್ರಾಥಮಿಕ ಶಾಲೆಯನ್ನು ಮುಚ್ಚಲು ಮುಂದಾಗಿದೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *