ನೆಟ್ಟಿಗರ ಮನಗೆದ್ದ ನ್ಯೂಸ್‍ಪೇಪರ್ ಬಾಯ್

Public TV
2 Min Read

ಹೈದರಾಬಾದ್: ತೆಲಂಗಾಣ ಸಚಿವ ಕೆ.ಟಿ ರಾಮರಾವ್ ಓರ್ವ ಉತ್ತಮ ರಾಜಕಾರಣಿ ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಮೂಲಕ ಅನೇಕ ಘಟನೆಗಳನ್ನು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿರುತ್ತಾರೆ. ಅದೇ ರೀತಿ ಜಗ್ಗಿತಲ ಪಟ್ಟಣದ 12 ವರ್ಷದ ನ್ಯೂಸ್ ಪೇಪರ್ ಹುಡುಗ ಸಚಿವರ ಗಮನ ಸೆಳೆದಿದ್ದು, ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಸೈಕಲ್ ಮೂಲಕ ಹುಡುಗ ನ್ಯೂಸ್ ಪೇಪರ್ ಹಾಕುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ವೀಡಿಯೋವನ್ನು ದಾರಿಹೋಕರೊಬ್ಬರು ರೆಕಾರ್ಡ್ ಮಾಡಿದ್ದು, ಇದೇ ವೀಡಿಯೋ ಸಚಿವರ ಗಮನ ಸೆಳೆದಿದೆ.

ವೀಡಿಯೋದಲ್ಲಿ ಏನಿದೆ?
ಹುಡುಗ ಸೈಕಲ್‍ನಲ್ಲಿ ಪೇಪರ್ ಹಾಕುವಾಗ ಬೈಕ್ ಮೇಲೆ ಬರುವ ವ್ಯಕ್ತಿ ಹುಡುಗನ ಹತ್ತಿರ ಬೈಕ್ ನಿಲ್ಲಿಸಿ ನಿನ್ನ ಶಾಲೆ ಯಾವುದು ಎಂದು ಪ್ರಶ್ನಿಸುತ್ತಾರೆ. ಸರ್ಕಾರಿ ಹೈಸ್ಕೂಲ್ ಎಂದು ಉತ್ತರಿಸುತ್ತಾನೆ. ಅದು ಎಲ್ಲಿ ಬರುತ್ತದೆ ಎಂದು ಪ್ರಶ್ನಿಸಿದಾಗ ಹಳೆ ಬಸ್ ನಿಲ್ದಾಣದ ಬಳಿ ಇದೆ ಎಂದು ಹುಡುಗ ಉತ್ತರಿಸುತ್ತಾನೆ. ಈ ವಯಸ್ಸಿನಲ್ಲೇ ಪೇಪರ್ ಹಾಕುತ್ತಿದ್ದಿಯ ಎಂದು ಕೇಳಿದಾಗ, ಹಾಕಬಾರದಾ ಎಂದು ಹುಡುಗನೇ ಮುರು ಪ್ರಶ್ನಿಸುತ್ತಾನೆ. ಹಾಗೇನು ಇಲ್ಲ, ನೀನು ಮಾಡುತ್ತಿರುವುದು ಒಳ್ಳೆಯ ಕೆಲಸವಾಗಿದೆ. ಆದರೆ ಓದಿಕೊಳ್ಳುವ ವಯಸ್ಸಿನಲ್ಲಿ ಈ ರೀತಿ ಕೆಲಸ ಮಾಡುತ್ತಿದ್ದೀಯಲ್ಲ ಅದಕ್ಕೆ ಕೇಳಿದೆ ಎಂದು ಬೈಕ್ ಸವಾರ ಹೇಳುತ್ತಾರೆ.

ಬೈಕ್ ಸವಾರರ ಪ್ರಶ್ನಗೆ ಉತ್ತರಿಸಿದ ಬಾಲಕ ಚೆನ್ನಾಗಿ ಓದುತ್ತೇನೆ. ಹಾಗೇ ಕೆಲಸವನ್ನು ಮಾಡುತ್ತೇನೆ. ಅದರಲ್ಲೇನು ತಪ್ಪಿದೆ ಎನ್ನುತ್ತಾರೆ. ತಪ್ಪೇನು ಇಲ್ಲ ಓದಿಕೊಳ್ಳುವ ವಯಸ್ಸಿನಲ್ಲಿ ನೀನು ಇಷ್ಟು ಕಷ್ಟಪಡುತ್ತಿದ್ದೀಯಲ್ಲ ಅದು ನನಗೆ ಇಷ್ಟವಾಯಿತ್ತು ಅದಕ್ಕೆ ಕೇಳಿದೆ ಎನ್ನುತ್ತಾರೆ. ಈಗ ಕಷ್ಟಪಟ್ಟರೆ ಏನಾದರೂ ಸಾಧಿಸಬಹುದು ಎಂದು ಹೇಳುತ್ತಾನೆ.

ಈ ವೀಡಿಯೋ ಟ್ವೀಟ​ರ್‌​ನಲ್ಲಿ ಶೇರ್ ಮಾಡಿಕೊಂಡಿರುವ ಕೆ.ಟಿ ರಾಮರಾವ್, ಜಗ್ಗಿತಲ ಪಟ್ಟಣದ ಈ ವೀಡಿಯೋ ನಿಜಕ್ಕೂ ನನಗೆ ಇಷ್ಟವಾಯಿತು. ಸರ್ಕಾರಿ ಹೈಸ್ಕೂಲ್ ವಿದ್ಯಾರ್ಥಿ ಪ್ರಕಾಶ್ ಅವರ ನಂಬಿಕೆ, ಚಿಂತನೆ ಮತ್ತು ಅಭಿವ್ಯಕ್ತಿಯ ಸ್ಥಿರತೆ ನನಗೆ ಇಷ್ಟವಾಯಿತ್ತು ಎಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಾಲಕನ ಕುರಿತಾಗಿ ಮೆಚ್ಚುಗೆ ವ್ಯಕ್ತವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *