ಶಕ್ತಿ ಯೋಜನೆಯಿಂದ ಆಟೋದವರಿಗೆ ಸಮಸ್ಯೆಯಾದ್ರೆ ಸರ್ಕಾರ ಪರಿಹಾರ ನೀಡಲಿದೆ – ರಾಮಲಿಂಗಾರೆಡ್ಡಿ

Public TV
1 Min Read

ಬೆಂಗಳೂರು: ಶಕ್ತಿ ಯೋಜನೆಯಿಂದ (Shakti Scheme) ಆಟೋ ಚಾಲಕರಿಗೆ (Auto Drivers) ಸಮಸ್ಯೆಯಾದರೆ, ಸರ್ಕಾರ ಅವರ ನೆರವಿಗೆ ಧಾವಿಸೋ ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಭೋಜೇಗೌಡ ಪ್ರಶ್ನೆ ಕೇಳಿದರು. ಶಕ್ತಿ ಯೋಜನೆ ಪರಿಣಾಮ ಆಟೋ ರಿಕ್ಷಾಗಳ ಮೇಲೆ ಬಿದ್ದಿದೆ. ಉಚಿತ ಬಸ್ ಪ್ರಯಾಣದಿಂದ ಆಟೋದವರು ಜೀವನ ಮಾಡಲು ಆಗುತ್ತಿಲ್ಲ. ರಾಜ್ಯದಲ್ಲಿ ಸುಮಾರು 5 ಲಕ್ಷ ಆಟೋ ಚಾಲಕರು ಇದ್ದಾರೆ. ಅವರಿಗೆ ಜೀವನ ಮಾಡಲು ಆಗುತ್ತಿಲ್ಲ. ಇವರ ನೆರವಿಗೆ ಸರ್ಕಾರ ಬರಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಲೋಕಸಭೆಯಲ್ಲಿ ಸ್ಪರ್ಧಿಸಲು ಪಕ್ಷ ಸೂಚನೆ ನೀಡಿದ್ರೆ ಆದೇಶ ಪಾಲಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ

ಇದಕ್ಕೆ ಉತ್ತರ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಜೂನ್ 11ಕ್ಕೆ ಶಕ್ತಿ ಯೋಜನೆ ಪ್ರಾರಂಭ ಆಯ್ತು. ಉತ್ತಮವಾಗಿ ಯೋಜನೆ ನಡೆಯುತ್ತಿದೆ. ಯೋಜನೆ ಜಾರಿ ಆಗಿ ಒಂದು ತಿಂಗಳು ಆಗಲಿ. ಆಟೋದವರಿಗೆ ಏನ್ ಸಮಸ್ಯೆ ಆಗಿದೆ ಅಂತ ನೋಡೋಣ ಎಂದು ಹೇಳಿದರು.

ಈವರೆಗೂ ಯಾವ ಆಟೋ ಚಾಲಕರ ಸಂಘದವರು ನನ್ನ ಬಳಿ ಬಂದು ಕಷ್ಟ ಅಂತ ಹೇಳಿಲ್ಲ. ಯಾವುದೇ ಆಟೋ ಚಾಲಕರು ನನಗೆ ಮನವಿ ಮಾಡಿಲ್ಲ. ಒಂದು ತಿಂಗಳು ಆಗಲಿ, ಬಳಿಕ ಪರಿಶೀಲನೆ ಮಾಡಿ ಆಟೋದವರಿಗೆ ಸಮಸ್ಯೆಯಾದರೆ ಸರ್ಕಾರ ಪರಿಹಾರ ಕೊಡಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: 40% ಕಮಿಷನ್ ಸೇರಿ ಎಲ್ಲದರ ತನಿಖೆಯಾಗ್ಲಿ- ಸಿದ್ದರಾಮಯ್ಯಗೆ ಬೊಮ್ಮಾಯಿ ಸವಾಲ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್