ಪೆಟ್ರೋಲ್ ಕೇಳೋ ನೆಪದಲ್ಲಿ ಮಂಗ್ಳೂರಿನಲ್ಲಿ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Public TV
1 Min Read

ಮಂಗಳೂರು: ದುಷ್ಕರ್ಮಿಗಳ ತಂಡವೊಂದು ಪೆಟ್ರೋಲ್ ಕೇಳುವ ನೆಪದಲ್ಲಿ ಯುವಕರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಮಂಗಳೂರಿನ ಅಡ್ಯಾರ್ ಪದವಿನಲ್ಲಿ ನಡೆದಿದೆ.

ಕೇರಳದ ಮಲಪ್ಪುರಂ ನಿವಾಸಿ, ಮಂಗಳೂರಿನ ಖಾಸಗಿ ಕಾಲೇಜೊಂದರ 3ನೇ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಾಜಿದ್ ಹಾಗೂ ಆತನ ಸ್ನೇಹಿತನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಸಾಜಿದ್ ಮತ್ತು ಆತನ ಸ್ನೇಹಿತ ನೌಫಲ್ ಅಡ್ಯಾರ್ ಪದವಿನಿಂದ ಬಿತ್ತುಪಾದೆಗೆ ತೆರಳುತ್ತಿದ್ದಾಗ ವರ ತಂಡವೊಂದು ಪೆಟ್ರೋಲ್ ಖಾಲಿಯಾಗಿದ್ದು, ಪೆಟ್ರೋಲ್ ಇದ್ದರೆ ನೀಡಿ ಎಂದು ಕೇಳಿದೆ.

ಸಾಜಿದ್ ಹಾಗೂ ನೌಫಲ್ ಪೆಟ್ರೋಲ್ ನೀಡಲು ಮುಂದಾಗುತ್ತಿದ್ದಂತೆ ಇವರ ಮೇಲೆ ದಾಳಿ ನಡೆದಿದೆ. ಘಟನೆಯಿಂದ ಸಾಜಿದ್ ನ ಕೈ ಹಾಗೂ ಹೊಟ್ಟೆಯ ಬಲಭಾಗಕ್ಕೆ ತೀವ್ರ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *