ನಾನು ಜೆಡಿಎಸ್‍ನಲ್ಲಿ ಇರಬೇಕಾ? ಬೇಡ್ವಾ?: ಜಿ.ಟಿ.ದೇವೆಗೌಡ

Public TV
1 Min Read

ಮೈಸೂರು: ನಾನು ಜೆಡಿಎಸ್‍ನಲ್ಲಿ ಇರಬೇಕಾ, ಬೇಡ್ವಾ ಎನ್ನುವುದನ್ನು ಜನರು ತೀರ್ಮಾನ ಮಾಡುತ್ತಾರೆ. ಕ್ಷೇತ್ರದ ಮತದಾರರು ಹೇಳಿದ ಮಾತನ್ನು ಕೇಳುತ್ತೇನೆ. ಕುಮಾರಸ್ವಾಮಿ ಅವರ ಯಾವುದೇ ಅಭಿಪ್ರಾಯ ಇದ್ದರು ನನ್ನ ನಿರ್ಧಾರ ಬದಲಾಗುವುದಿಲ್ಲ. ಎಂದು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವ ಊಹಪೋಹಗಳಿಗೆ ಶಾಸಕ ಜಿ.ಟಿ.ದೇವೆಗೌಡ ಸ್ಪಷ್ಟನೆ ನೀಡಿದ್ದಾರೆ.


ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎಲ್ಲಿರಬೇಕು ಅಂತ ಜನರು ತೀರ್ಮಾನ ಮಾಡುತ್ತಾರೆ. ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಾಗ ನನಗೆ ಆಹ್ವಾನ ಇರಲಿಲ್ಲ. ಬೆಳವಾಡಿ ದೇವಾಲಯಕ್ಕೆ ಹಣವನ್ನು ನೀಡಿದ್ದೆ. ಆದ್ರು ಆಹ್ವಾನ ಮಾಡಲಿಲ್ಲ. ಅದೇ ರೀತಿ ರಮ್ಮನಹಳ್ಳಿಗು ಆಹ್ವಾನ ಮಾಡಲಿಲ್ಲ. ಇದೀಗಾ ಕ್ಷೇತ್ರದಲ್ಲಿ ಕೆಲವು ಕಾಮಗಾರಿ ಉದ್ಘಾಟನೆ ನಡೆಯುತ್ತಿದೆ. ಅದಕ್ಕೆ ಸಿದ್ದರಾಮಯ್ಯ ಬರುತ್ತಿದ್ದಾರೆ. ಸ್ಥಳಿಯ ಶಾಸಕನಾಗಿ ನಾನು ಭಾಗಿಯಾಗುತ್ತಿದ್ದೇನೆ ಅಷ್ಟೆ ಎಂದರು. ಇದನ್ನೂ ಓದಿ: ಜಿಟಿಡಿ ಎಲ್ಲಿಗೆ ಹೋಗಬೇಕು ಹೋಗಲಿ ಬಿಡಿ: ಹೆಚ್‍ಡಿಡಿ


ಕ್ಷೇತ್ರದ ಜನರು ಕರೆದಾಗ ನಾನು ಹೋಗಲೆ ಬೇಕು. ಈ ಹಿಂದೆ ಕೂಡ ಸಿದ್ದರಾಮಯ್ಯರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಬೊಮ್ಮಾಯಿ ಅವರು ಬಂದಾಗಲು ಅವರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಆದರೆ ನಾನು ಪಕ್ಷ ಸೇರುವುದು, ಬಿಡುವುದು ಎಲ್ಲವು ಜನರಿಗೆ ಬಿಟ್ಟಿದ್ದು. ನಾನು ಈ ಬಗ್ಗೆ ಕ್ಷೇತ್ರದ ಜನರ ಬಳಿ ಅಭಿಪ್ರಾಯ ಕೇಳಿಲ್ಲ. ಇನ್ನು ಚುನಾವಣೆಗೆ ಸಾಕಷ್ಟು ಸಮಯ ಇದೆ. ಎಲ್ಲವೂ ಮತದಾರ ತೀರ್ಮಾನದಂತೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹಠಾತ್ ಹಾರ್ಟ್ ಅಟ್ಯಾಕ್ ಆದಾಗ ಏನ್ ಮಾಡ್ಬೇಕು?

Share This Article
Leave a Comment

Leave a Reply

Your email address will not be published. Required fields are marked *