ಹೊಡದ್ರೆ ಹುಲಿ ಹೊಡಿಬೇಕು, ಕತ್ತೆಯನ್ನಲ್ಲ ಅನ್ನೋದ್ನ ಜಿಟಿಡಿ ಮಾಡಿ ತೋರ್ಸಿದ್ದಾರೆ: ಪ್ರತಾಪ್ ಸಿಂಹ

Public TV
1 Min Read

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರನ್ನು ಸೋಲಿಸಿದ್ದಕ್ಕೆ, ಹೊಡೆದರೆ ಹುಲಿಯನ್ನೇ ಹೊಡೆಯಬೇಕು, ಕತ್ತೆಯನ್ನಲ್ಲ ಎನ್ನುವುಂತೆ ಮಾಡಿ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡರನ್ನು ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಶಂಸಿಸಿದ್ದಾರೆ.

ನಗರದಲ್ಲಿ ರೈಲ್ವೆ ನಿಲ್ದಾಣ ಸ್ಥಳ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವ ಹಾಗೂ ನಮ್ಮ ನಿಮ್ಮಲ್ಲೆರ ಅಚ್ಚುಮೆಚ್ಚಿನ ನಾಯಕರು ಜಿ.ಟಿ.ದೇವೇಗೌಡರು. ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಶಕ್ತಿ ಏನು ಎಂಬುದನ್ನು ತೋರಿಸಿದ್ದಾರೆ. ನಮ್ಮ ಉತ್ತರ ಕರ್ನಾಟಕ ಮಾತಿನ ಶೈಲಿಯಲ್ಲಿ ಹೇಳಬೇಕಾದರೆ, ಹೊಡೆದರೆ ಹುಲಿಯನ್ನೇ ಹೊಡಿಬೇಕು ಕತ್ತೆಯನ್ನಲ್ಲ ಎನ್ನುವ ಮಾತಿನ ಹಾಗೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಸಿದ್ದರಾಮಯ್ಯನವರನ್ನೇ ಸೋಲಿಸಿದ್ದಾರೆ ಎನ್ನುವ ಮೂಲಕ ಜಿಟಿಡಿಯವರ ಗೆಲುವಿನ ಪರಿಯನ್ನು ಹೊಗಳಿದರು.

ಸಂಸದ ಪ್ರತಾಪ್ ಸಿಂಹ ಚುನಾವಣೆ ಮುಗಿದರೂ ಸಹ ಫಲಿತಾಂಶದ ಗುಂಗಲ್ಲಿ ಸಿದ್ದರಾಮಯ್ಯನವರ ಸೋಲಿನ ಬಗೆಯನ್ನು ವ್ಯಂಗ್ಯವಾಡುವ ಮೂಲಕ ಮತ್ತೊಮ್ಮೆ ಟಾಂಗ್ ನೀಡಿದ್ದಾರೆ. ಅಲ್ಲದೇ ಉತ್ತರ ಕರ್ನಾಟಕದ ಮಾತಿನ ಶೈಲಿಯಲ್ಲೇ ಅವರನ್ನು ಕಿಚಾಯಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
1 Comment

Leave a Reply

Your email address will not be published. Required fields are marked *