ಮನೆ ಬಾಗಿಲು ಮುರಿದು ಬಂದೂಕು ಕದ್ದ ಕಳ್ಳರು

By
1 Min Read

ಹಾಸನ: ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಬಂದೂಕನ್ನು ಕದ್ದಿರುವ ಘಟನೆ ಅರಸೀಕೆರೆಯ (Arsikere) ಕೆ.ಕೆಂಗನಹಳ್ಳಿಯಲ್ಲಿ ನಡೆದಿದೆ.

ಅನಿಲ್‍ಕುಮಾರ್ ಎಂಬವರಿಗೆ ಸೇರಿದ ಬಂದೂಕನ್ನು ಕಳ್ಳರು ಕದ್ದೊಯ್ದಿದ್ದಾರೆ. ಅನಿಲ್ ಅವರು ತಂದೆಯ ಕಣ್ಣಿನ ಶಸ್ತ್ರಚಿಕಿತ್ಸೆಗೆ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಕಳ್ಳರು ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಈ ಕೃತ್ಯ ಎಸಗಿದ್ದಾರೆ. ಇದನ್ನೂ ಓದಿ: ಬಸವಸಾಗರ ಜಲಾಶಯ ಭರ್ತಿ – ಕೃಷ್ಣಾ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ರಿಲೀಸ್

ಮನೆಯಲ್ಲಿ ಯಾರು ಇಲ್ಲದಿರುವುದು ಗ್ರಾಮಸ್ಥರಿಗೆ ಗೊತ್ತಿತ್ತು. ಆದರೆ ಬೆಳಗ್ಗೆ ಬಾಗಿಲು ತೆರೆದಿರುವುದನ್ನು ನೋಡಿದ ಗ್ರಾಮಸ್ಥರು ಮನೆಯ ಬಳಿ ತೆರಳಿ ನೋಡಿದ್ದಾರೆ. ಈ ವೇಳೆ ಬಾಗಿಲು ಒಡೆದಿರುವ ವಿಚಾರ ತಿಳಿದಿದೆ. ಕೂಡಲೇ ಗ್ರಾಮಸ್ಥರು ಅನಿಲ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.

ಬೆಂಗಳೂರಿನಿಂದ ಅನಿಲ್ ವಾಪಾಸ್ ಬಂದು ನೋಡಿದಾಗ ಬೀರುವಿನಲ್ಲಿಟ್ಟಿದ್ದ 20,000 ರೂ. ಬೆಲೆ ಬಾಳುವ ಡಿಬಿಬಿಎಲ್ ಬಂದೂಕನ್ನು ಕದ್ದಿರುವುದು ತಿಳಿದಿದೆ.

ಈ ಸಂಬಂಧ ಜಾವಗಲ್ (Javagal) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 110 ಅಡಿ ತಲುಪಿದ KRS ನೀರಿನ ಮಟ್ಟ – ಡ್ಯಾಂ ಭರ್ತಿಗೆ 14 ಅಡಿಯಷ್ಟೇ ಬಾಕಿ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್