ಸಮಯ ಸಾಧಕ ಶಾಸಕರು ಕಾಂಗ್ರೆಸ್ ಬಾಗಿಲು ತಟ್ಟುತಿದ್ದಾರೆ: ಎಚ್.ಆಂಜನೇಯ

Public TV
1 Min Read

ಕೊಪ್ಪಳ: ಕಳೆದ ಬಾರಿ ಬಿಜೆಪಿಯವರು ಹಂದಿ, ಹಸು, ನಾಯಿ, ನರಿಗಳನ್ನು ಖರೀದಿಸುವಂತೆ ಶಾಸಕರನ್ನು ಖರೀದಿ ಮಾಡಿ ಸರ್ಕಾರ ರಚನೆ ಮಾಡಿದ್ದಾರೆ. ಈಗ ಆ ಶಾಸಕರೇ ಮತ್ತೆ ಕಾಂಗ್ರೆಸ್ ಬಾಗಿಲು ತಟ್ಟುತಿದ್ದಾರೆ. ಅವರನ್ನು ಪುನಃ ಕಾಂಗ್ರೆಸ್‍ಗೆ ಸೇರಿಸಿಕೊಳ್ಳುವ ಮಾತಿಲ್ಲ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಣ್ಣ ನೋಡಿ ಓಡಿ ಹೋಗಿರುವವರನ್ನು ಯಾವುದೇ ಕಾರಣಕ್ಕೂ ಕಾಂಗ್ರೆಸ್‍ನಲ್ಲಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಸಮಯ ಸಾಧಕರಿಗೆ ಪಕ್ಷದಲ್ಲಿ ಜಾಗವಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ದುರಾಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 140 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಬಹುಮತ ಪಡೆಯೋದು ಖಚಿತವಾಗಿದೆ ಎಂದರು. ಇದನ್ನೂ ಓದಿ: ಹಿಜಬ್ ಪರಿಸ್ಥಿತಿ ಬಿಗಡಾಯಿಸಲು ಕಾಂಗ್ರೆಸ್ ನಾಯಕರು ಕಾರಣ: ಬಿಸಿ ನಾಗೇಶ್

bjp - congress

ಸಂವಿಧಾನಕ್ಕೆ ಅಪಮಾನ, ಬದಲಾವಣೆಗಳಂತಹ ಮಾತುಗಳು ಕೇಳಿಬರುತ್ತಿವೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರಾದರೂ ಸಂವಿಧಾನ ಬದಲಾವಣೆ ಮಾಡಿದರೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ರಕ್ತದೋಕುಳಿ ಹರಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್

Share This Article
Leave a Comment

Leave a Reply

Your email address will not be published. Required fields are marked *