ಇಡೀ ದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು ದೇವೇಗೌಡ್ರು: ಹೆಚ್.ಡಿ. ರೇವಣ್ಣ

Public TV
1 Min Read

ಹಾಸನ: ಇಡೀ ದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿದ್ದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

ಹಾಸನ ತಾಲೂಕಿನ ಹೆಚ್.ಆಲದಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸ್ಥಾನವನ್ನು ಅಲ್ಪಸಂಖ್ಯಾತರಿಗೆ, ದಲಿತರಿಗೆ ಹಂಚಿಕೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ನೀಡಿದ ಹೇಳಿಕೆಗೆ ಉತ್ತರಿಸಿ, ಅದು ಕಾಂಗ್ರೆಸ್‍ನ ಆಂತರಿಕ ವಿಷಯವಾಗಿದ್ದು, ನಾನು ಈ ಬಗ್ಗೆ ಉತ್ತರಿಸಲು ಹೋಗುವುದಿಲ್ಲ. ಕೋಮುವಾದಿಗಳನ್ನು ದೂರ ಇಡಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಹೇಳಿದ ತಕ್ಷಣ ಯಾವುದೂ ಸತ್ಯ ಆಗಲ್ಲ: ಬಿ.ಸಿ.ಪಾಟೀಲ್

ಇದೇ ವೇಳೆ ಇಡೀ ದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದಾರೆ ಎಂದರೆ ಅದು ದೇವೇಗೌಡರು ಮಾತ್ರ ಎಂದು ಉತ್ತರಿಸಿದರು. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ, ಈ ಬಗ್ಗೆ ಅವರು ಪ್ರಣಾಳಿಕೆಯಲ್ಲಿ ಹೇಳಲಿ. ನಾವೇನು ಬೇಡ ಅಂತೀವಾ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ನೀವೇ ಎತ್ತಾಕ್ತಿರಾ, ಇಲ್ಲಾ ನಾನೇ ಎತ್ತಿ ಹಾಕ್ಲಾ – ತೊಂದ್ರೆ ಕೊಡ್ತಿದ್ದ ವ್ಯಕ್ತಿಯ ವಿರುದ್ಧ ರೇವಣ್ಣ ಆಕ್ರೋಶ

Share This Article
Leave a Comment

Leave a Reply

Your email address will not be published. Required fields are marked *