ಧರ್ಮಸ್ಥಳ ಪ್ರಕರಣವನ್ನು ರಾಜಕೀಯಕ್ಕೆ ಬಳಸಲು ಸಾಧ್ಯವಿಲ್ಲ: ಹೆಚ್.ಕೆ ಪಾಟೀಲ್

Public TV
2 Min Read

ಗದಗ: ಧರ್ಮಸ್ಥಳ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಲು ಸಾಧ್ಯನಾ ಅಂತ ನೋಡಲು ಪ್ರಯತ್ನ ಮಾಡ್ತಿದ್ದಾರೆ. ಅಂತವರಿಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಕಾನೂನು, ನ್ಯಾಯ ಸಚಿವ ಹೆಚ್.ಕೆ ಪಾಟೀಲ್ (H K Patil) ಹೇಳಿದ್ದಾರೆ.

ಗದಗದಲ್ಲಿ (Gadag) ಮಾಧ್ಯಮಗಳೊಂದಿಗೆ ಮಾತನಾತನಾಡಿದ ಅವರು, ಧರ್ಮಸ್ಥಳದ (Dharmasthala Case) ವಿಷಯ ವಿಧಾನಸಭೆ ಒಳಗೆ ಚರ್ಚೆಗೆ ಬಂದಿದೆ. ಗೃಹ ಸಚಿವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅನಾಮಿಕ ವ್ಯಕ್ತಿ ನ್ಯಾಯಾಲಯದಲ್ಲಿ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ನೀಡಿದ್ದ. ಅದರ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಯಬೇಕಾಗಿತ್ತು. ಆ ತನಿಖೆ ನಡೆದಿದೆ. ತನಿಖೆಯು ಯಾವ ಹಂತದಲ್ಲಿದೆ ಎಂಬ ಕೆಲವು ಭಾಗ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಈ ಬಗ್ಗೆ ಬಹುಶಃ ಸೋಮವಾರ ಇನ್ನು ಹೆಚ್ಚಿನ ಮಾಹಿತಿಯನ್ನು ಗೃಹ ಸಚಿವರು ನೀಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ; 1.68 ಕೋಟಿ, 6 ಕೆಜಿ ಚಿನ್ನದ ಬಿಸ್ಕೆಟ್‌ ವಶಕ್ಕೆ

ಶಾಸನ ಸಭೆಯಲ್ಲಿ ಚರ್ಚೆ ಮಾಡಿದ್ದರಿಂದ ಸೋಮವಾರ ಸರ್ಕಾರ ತನ್ನ ಉತ್ತರ ನೀಡಲಿದೆ. ನಾವು ಧರ್ಮಸ್ಥಳ ಮಂಜುನಾಥನ ಸನ್ನಿಧಾನ ಬಗ್ಗೆ ವಿಶೇಷ ಭಕ್ತಿ, ಗೌರವ, ಅಭಿಮಾನ ಹೊಂದಿದವರು. ಆದ್ದರಿಂದ ಸರ್ಕಾರದ ಬಗ್ಗೆ ಯಾರು ಅನುಮಾನದ ಮಾತುಗಳನ್ನಾಡುತ್ತಿದ್ದಾರೆ. ಅವರು ಕೇವಲ ರಾಜಕೀಯಕ್ಕಾಗಿ ಮಾತನಾಡುತ್ತಿದ್ದಾರೆ. ಇವತ್ತು ಮಾತನಾಡುವವರು 10 ದಿನಗಳ ಹಿಂದೆ ಯಾಕೆ ಮಾತನಾಡಲಿಲ್ಲ.? ಸಮಯದ ಉಪಯೋಗ ಮಾಡಿಕೊಂಡು ಏನಾದ್ರು ಮಾಡುವ ಪ್ರಯತ್ನಿಸಿದರೆ ಅದರಿಂದ ಏನು ಲಾಭ ಆಗುವುದಿಲ್ಲ ಎಂದು ಧರ್ಮಸ್ಥಳ ಪ್ರಕರಣ ರಾಜಕೀಯಕ್ಕೆ ಬಳಸಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಶರಣಬಸಪ್ಪ ಅಪ್ಪ ಲಿಂಗೈಕ್ಯ – ಅಂತ್ಯಕ್ರಿಯೆಗೆ 1 ಲಕ್ಷಕ್ಕೂ ಅಧಿಕ ಬಿಲ್ವಪತ್ರೆ, 5050 ವಿಭೂತಿ ಸಿದ್ಧತೆ

ಇನ್ನು ಒಳಮೀಸಲಾತಿ ಕುರಿತು ಮಾತನಾಡಿದ ಅವರು, ಒಳಮೀಸಲಾತಿಗೆ ಸಂಬಂಧಪಟ್ಟಂತೆ ಆ.16 ರಂದು ವಿಶೇಷ ಸಚಿವ ಸಂಪುಟ ಕರೆಯಲಾಗಿತ್ತು. ಆದರೆ ಈ ಬಗ್ಗೆ ಕೆಲವು ಸಚಿವರು, ಸಿಎಂ ಅವರನ್ನು ಭೇಟಿಯಾಗಿ ಕೆಲವು ವಿಚಾರಗಳನ್ನು ಚರ್ಚೆ ಮಾಡ್ತಿದ್ದಾರೆ. ಅದಕ್ಕೆ ಒಂದೆರಡು ದಿನ ಹೆಚ್ಚಿಗೆ ಸಮಯ ತೆಗೆದುಕೊಂಡಿದ್ದಾರೆ. ಆದ್ದರಿಂದ ಆ.19ರಂದು ಸಚಿವ ಸಂಪುಟದ ಸಭೆಯನ್ನು ಕರೆಯಲಾಗಿದೆ. ಅದರೊಳಗೆ ನಾಗಮೋಹನ್‌ದಾಸ್ ವರದಿ ಬಗ್ಗೆ ಅಂತಿಮವಾಗಿ ಚರ್ಚೆ ಹಾಗೂ ನಿರ್ಣಯ ಆಗುತ್ತದೆ ಎಂದು ತಿಳಿಸಿದ್ದಾರೆ.

Share This Article