ಸರ್ಕಾರದ ಮೇಲೆ ಸುಳ್ಳು ಆರೋಪ – ಅದಕ್ಕೆ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್: ಹೆಚ್.ಕೆ ಪಾಟೀಲ್

Public TV
1 Min Read

ಬೆಂಗಳೂರು: ನಮ್ಮ ಸರ್ಕಾರದ ಮೇಲೆ ತಪ್ಪು ಮಾಹಿತಿ ಕೊಡುವುದು. ಅಪಪ್ರಚಾರ ಮಾಡುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ(BJP) ವಿರುದ್ಧ ಸರ್ಕಾರ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್(H K Patil) ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಸುಳ್ಳು ಮಾಹಿತಿ ಕೊಡ್ತಿದ್ದಾರೆ. ಸರ್ಕಾರದ ವಿರುದ್ಧ ತಪ್ಪು ಅಭಿಪ್ರಾಯ ಬರೋ ಹಾಗೇ ಮಾಡ್ತಿದ್ದಾರೆ. ಹೀಗಿರುವಾಗ ಸುಮ್ಮನೆ ಇರೋದಕ್ಕೆ ಸಾಧ್ಯನಾ? ಹೀಗಾಗಿ ಕೇಸ್ ಹಾಕಲಾಗಿದೆ. ಸರ್ಕಾರದ ವಿರುದ್ಧ ಮಾತಾಡಿದ್ರೆ ಸುಮ್ಮನೆ ಇರೋಕೆ ಸಾಧ್ಯವಿಲ್ಲ. ಅದಕ್ಕೆ ಕೇಸ್ ಹಾಕಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸ್ವಚ್ಛವಾಹಿನಿ ಚಾಲಕಿಯರ ವೇತನ, ಸೌಲಭ್ಯಗಳ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್ ಖರ್ಗೆ

ಬಿಜೆಪಿ ಸರ್ಕಾರ ಇದ್ದಾಗ 40% ಕಮಿಷನ್ ಬಗ್ಗೆ ಕಾಂಗ್ರೆಸ್(Congress) ಆರೋಪ ಮಾಡಿತ್ತು. ಆಗ ನೀವು ಮಾಡಿದ್ದು ಸುಳ್ಳು ಆರೋಪ ಅಲ್ವಾ ಎಂಬ ಪ್ರಶ್ನೆ. ವಿಪಕ್ಷ ಇದ್ದಾಗ ನಾವು ಮಾಡಿದ ಆರೋಪಗಳಿಗೆ ಅವರು ಕೇಸ್ ಹಾಕಿಲ್ಲ ಅಂದರೆ ಅದರ ಬಗ್ಗೆ ನಮಗೆ ಗೊತ್ತಿಲ್ಲ. ಕೇಸ್ ಹಾಕೋದು ಬಿಡೋದು ಅವರಿಗೆ ಬಿಟ್ಟಿದ್ದು. ನಮ್ಮ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಅದಕ್ಕೆ ನಾವು ಕೇಸ್ ಹಾಕಿದ್ದೇವೆ ಎಂದು ಹೇಳಿದರು.

Share This Article