ಭಾರತೀಯರಿಗೆ ಇಂದು ಸಮಾಧಾನ ತಂದ ದಿನ: ಹೆಚ್.ಕೆ ಪಾಟೀಲ್

Public TV
1 Min Read

ಗದಗ: ಇವತ್ತು ಭಾರತೀಯರಿಗೆ ಸಮಾಧಾನದ ದಿನವಾಗಿದೆ. ಉಗ್ರರು ಕುತಂತ್ರದಿಂದ ದೇಶದ ಪ್ರಜೆಗಳ ಹತ್ಯೆಗೈದಿದ್ದರು. ಅವರಿಗೆ ತಕ್ಕ ಶಾಸ್ತಿ ಮಾಡಲು ಸೇನೆಯು ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ್ದು ಸಮಾಧಾನ ತಂದಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್(H K Patil) ಹೇಳಿದರು.

ಗದಗನಲ್ಲಿ(Gadag) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಸೈನ್ಯ 9 ಸ್ಥಳಗಳಲ್ಲಿ ಆಪರೇಷನ್ ಸಿಂಧೂರ(Operation Sindoor) ಹೆಸರಲ್ಲಿ ಕಾರ್ಯಚರಣೆ ಮಾಡಿದೆ. ದೇಶದ ಜನ ನಿರ್ಣಯಿಸಿ, ಒಗ್ಗಟ್ಟಿನ ಬಲವನ್ನು ಸೈನ್ಯಕ್ಕೆ ನೀಡಿದ್ದೇವೆ. ಭಾರತವನ್ನು(India) ಕೆಣಕಿದರೇ ತಕ್ಕ ಶಾಸ್ತಿ ಆಗುತ್ತದೆ. ದಾಳಿ ಮೂಲಕ ಮೊದಲ ಹೆಜ್ಜೆಯನ್ನು ಇಂದು ಇಟ್ಟಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: ʻಆಪರೇಷನ್‌ ಸಿಂಧೂರʼ ಪಾಕ್‌ಗೆ ಎಚ್ಚರಿಕೆ ಗಂಟೆ, ಭದ್ರತೆ ವಿಚಾರದಲ್ಲಿ ರಾಜಿ ಇಲ್ಲ: ಗುಡುಗಿದ ಸಿದ್ದರಾಮಯ್ಯ

ಭಾರತ ಕೇವಲ ಶಾಂತಿ ಪ್ರಿಯರು ಎಂದು ಪಾಕಿಸ್ತಾನದವರು ತಿಳಿದುಕೊಂಡಿದ್ದರು. ಅವರಿಗೆ ಸರಿಯಾದ ಉತ್ತರ ನೀಡುವ ಮೂಲಕ ಜ್ಞಾನೋದಯ ಮಾಡಲಾಗಿದೆ. ಭಾರತವನ್ನು ಕೆಣಕಿದರೆ ಬಿಡುವ ಮಾತೇ ಇಲ್ಲ ಎನ್ನುವಂತಹ ಕಾರ್ಯಚರಣೆ ಮಾಡಲಾಗಿದೆ. ಇದು ಯುದ್ಧ ಕಾಲವಾಗಿದ್ದು, ಎಲ್ಲರೂ ಸನ್ನದ್ಧರಾಗಿರಬೇಕು. ಎಲ್ಲರೂ ತಯಾರಿ ಮಾಡಿಕೊಳ್ಳಬೇಕಿದೆ ಎಂದರು. ಇದನ್ನೂ ಓದಿ: I TOLD MODI – ಆಪರೇಷನ್‌ ಸಿಂಧೂರ ಬೆನ್ನಲ್ಲೇ ಕಾರ್ಟೂನ್‌ ವೈರಲ್‌ !

ಜಿಲ್ಲೆಯಲ್ಲಿ ಡಿಸಿ, ಎಸ್ಪಿ ಹಾಗೂ ಮಾಜಿ ಸೈನ್ಯದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ನಾಳೆ ಮಾಜಿ ಸೈನಿಕರು, ಎನ್‌ಸಿಸಿ, ಸ್ಕೌಟ್ಸ್, ಗೈಡ್ಸ್, ಪೊಲೀಸ್ ಅಂಗ ಸಂಸ್ಥೆಗಳ ಜೊತೆ ಡಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಜನರನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.

Share This Article