ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅರೆಸ್ಟ್

Public TV
2 Min Read

ಬೆಂಗಳೂರು: ಗೌರಿ ಹತ್ಯೆಯ ತನಿಖೆ ವೇಳೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪತ್ರಕರ್ತರೊಬ್ಬರ ಹತ್ಯೆಗೆ ಸುಪಾರಿ ನೀಡಿದ ಆರೋಪದಡಿ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆಯನ್ನು ಪೊಲೀಸರು ಬಂಧಿಸಿದ್ದಾರೆ.

ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ರವಿ ಬೆಳಗೆರೆ ಅವರನ್ನು ಬಂಧಿಸಲಾಗಿದೆ ಎಂದು ಪಬ್ಲಿಕ್ ಟಿವಿಗೆ ಸಿಸಿಬಿ ಮುಖ್ಯಸ್ಥ ಸತೀಶ್ ಕುಮಾರ್ ತಿಳಿಸಿದ್ದಾರೆ. ಶಶಿಧರ್ಮುಂಡೇವಾಡಗಿ  ಸ್ನೇಹಿತರಿಗೆ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ನೀಡಿದ ಆರೋಪದಲ್ಲಿ ರವಿ ಬೆಳಗೆರೆ ಅವರನ್ನು ಬಂಧಿಸಲಾಗಿದೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ವೇಳೆ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿ ಬಂಧಿಸಿತ್ತು. ಆತ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಈ ಪ್ರಕರಣ ಬೆಳಕಿಗೆ ಬಂದಿದೆ.

ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದರು ಎನ್ನಲಾಗಿದೆ.

ವಿಜಯಪುರದ ಜೈಲಿನಲ್ಲಿದ್ದ ಕೈದಿ ನೀಡಿದ್ದ ಸುಳಿವು ಆಧರಿಸಿ ಸುಪಾರಿ ಕಿಲ್ಲರ್ ನನ್ನು ಬಂಧಿಸಿದ್ದ ಪೊಲೀಸರು, ಯಲಹಂಕ ಮನೆಯಲ್ಲಿ ಮೂರು ರಿವಾಲ್ವರ್ ವಶಪಡಿಸಿಕೊಂಡಿದ್ದರು. ಆರಂಭದಲ್ಲಿ ಈತ ನನಗೆ ಈ ಪ್ರಕರಣದ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದನಾದರೂ ಎಸ್‍ಐಟಿ ಈ ಮನೆಯಲ್ಲಿ ತೀವ್ರ ಪರಿಶೋಧನೆ ನಡೆಸಿತ್ತು. ಈ ವೇಳೆ ಮನೆಯಲ್ಲಿದ್ದ ಖಾಲಿ ಟಿವಿಯ ಒಳಗಡೆ 3 ರಿವಾಲ್ವರ್ ಸಿಕ್ಕಿದೆ ಎಂದು ಪಬ್ಲಿಕ್ ಟಿವಿಗೆ ಪೊಲೀಸ್ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿತ್ತು.

ಸದ್ಯ ಸುಪಾರಿ ಕಿಲ್ಲರ್ ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಜೊತೆಗೆ ಆತನಿಂದ ವಶಕ್ಕೆ ಪಡೆದ ರಿವಾಲ್ವರ್ ತಪಾಸಣೆ ಮಾಡ್ತಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಂಟ್ರಿ ಮೇಡ್ ರಿವಾಲ್ವರ್ ರವಾನೆ ಮಾಡಲಾಗಿದೆ. ಸುಪಾರಿ ಕಿಲ್ಲರ್ ವಶಕ್ಕೆ ಪಡೆದು ಪೊಲೀಸರು ನಡೆಸಿದ ವಿಚಾರಣೆ ಇನ್ನಷ್ಟು ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ. ಈ ಪ್ರಕರಣದ ಹಿಂದೆ ಪ್ರಭಾವಿಗಳಿದ್ದಾರೆ ಎಂಬ ಮಾಹಿತಿಯನ್ನೂ ಈತ ನೀಡಿದ್ದಾನೆ ಎಂಬ ಮಾಹಿತಿಯೂ ಸಿಕ್ಕಿದೆ.

ಸುಪಾರಿ ಕಿಲ್ಲರ್ ವಶಕ್ಕೆ ಪಡೆದ ಸುದ್ದಿಯನ್ನು ಪಬ್ಲಿಕ್ ಟಿವಿ ಶನಿವಾರ ಮೊದಲು ಬ್ರೇಕ್ ಮಾಡಿತ್ತು. ಆದರೆ ಕೆಲ ಮಾಧ್ಯಮಗಳು ಈ ವರದಿಯನ್ನು ಅಲ್ಲಗೆಳೆದಿತ್ತು.

 

 

Share This Article
Leave a Comment

Leave a Reply

Your email address will not be published. Required fields are marked *