ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ

Public TV
2 Min Read

– ಧರೆಗುರುಳಿದ ಬೃಹತ್ ಮರಗಳು
– ಒಂದೇ ಮಳೆಗೆ ಕೆರೆಯಂತಾದ ಸಿಲಿಕಾನ್ ಸಿಟಿ

ಬೆಂಗಳೂರು: ಮಂಗಳವಾರ ಸಂಜೆ ಬೆಂಗಳೂರಲ್ಲಿ(Bengaluru) ವರುಣರಾಯ ಆರ್ಭಟಿಸಿದ್ದು, ನಗರದ ಬಾಣಸವಾಡಿ, ಕಲ್ಯಾಣನಗರ ಪ್ರದೇಶದಲ್ಲಿ ಆಲಿಕಲ್ಲು ಮಳೆ ಹಾಗೂ ಬಿರುಗಾಳಿ ಸಹಿತ ಮಳೆಯಾಗಿದೆ. ಬಿರುಗಾಳಿ ಮಳೆಗೆ ಟೆರೆಸ್ ಮೇಲಿನ ಗಾರ್ಡನ್ ಚೆಲ್ಲಾಪಿಲ್ಲಿಯಾಗಿವೆ.

ವರುಣನ ಅಬ್ಬರಕ್ಕೆ ಯಲಚೇನಹಳ್ಳಿ ಬಳಿ ಮೂರು ಮರಗಳು ಧರಾಶಾಹಿಯಾಗಿದ್ದು, ಮರ ಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂಗೊಂಡಿವೆ. ಬಿಬಿಎಂಪಿ ಸಿಬ್ಬಂದಿ ಮರ ತೆರವು ಕಾರ್ಯ ಮಾಡಿದರು. ಮಲ್ಲೇಶ್ವರಂನ(Malleshwaram) ಪಿಯುಸಿ ಬೋರ್ಡ್ ಬಳಿ ಮರವೊಂದು ರಸ್ತೆಗುರುಳಿದ್ದು, ಸದ್ಯ ಯಾವುದೇ ಹಾನಿ ಸಂಭವಿಸಿಲ್ಲ. ಅಲ್ಲದೇ ಕಾವೇರಿ ಜಂಕ್ಷನ್(Cauvery Junction) ಬಳಿ ಮರದ ಕೊಂಬೆಗಳು ಮುರಿದು ಬಿದ್ದಿದ್ದು, ವಿಂಡ್ಸನ್ ಮ್ಯಾನರ್ ಅಂಡರ್ ಪಾಸ್‌ನಿಂದ ಅರಮನೆ ಮೈದಾನ ಕಡೆ ಹೋಗುವ ಮಾರ್ಗದಲ್ಲಿ ಮುರಿದು ಬಿದ್ದಿದೆ. ಮರದ ಕೊಂಬೆ ಮುರಿದು ಬೀಳುವಾಗ ಯಾವುದೇ ವಾಹನ ಸಂಚಾರವಿರದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಇದನ್ನೂ ಓದಿ: ಬೆಂಗಳೂರಿಗೆ ಯಲ್ಲೋ ಅಲರ್ಟ್ – ಮುಂದಿನ 3 ಗಂಟೆ ಭಾರೀ ಮಳೆ

ಇನ್ನು ಒಂದೇ ಮಳೆಗೆ ಮೆಜೆಸ್ಟಿಕ್ ಬಸ್ ನಿಲ್ದಾಣಯು(Majestic Busstand) ಕೆರೆಯಂತಾಗಿದೆ. ಮಳೆ ನೀರು ಬಸ್ ನಿಲ್ದಾಣದ ಒಳಗೆ ನುಗ್ಗಿ, ಪ್ರಯಾಣಿಕರು ಪರದಾಡುವಂತಾಯಿತು. ಮಳೆಯ ಅವಾಂತರಕ್ಕೆ ನಾಗವಾರ ಹೆಬ್ಬಾಳ ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ಬಸ್ಸೊಂದು ಜಲಾವೃತವಾಗಿದೆ. ಜಲಾವೃತವಾಗಿದ್ದ ರಸ್ತೆಯಿಂದ ಬಸ್‌ನ ಒಳಗೆ ನೀರು ನುಗ್ಗಿದ್ದು, ಪ್ರಯಾಣಿಕರು ಮಳೆ ನೀರಿನಲ್ಲೇ ಕುಳಿತಿರುವಂತ ಪರಿಸ್ಥಿತಿ ಎದುರಾಗಿತ್ತು. ಇದನ್ನೂ ಓದಿ: ಪಾಕ್ ಮತ್ತೆ ದಾಳಿ ಮಾಡಿದ್ರೆ ಭಾರತ ನುಗ್ಗಿ ಹೊಡೆಯುತ್ತೆ: ಮೋದಿ

ಭಾರೀ ಮಳೆಗೆ ಕೆ ಆರ್ ಮಾರ್ಕೆಟ್(K R Market) ರಸ್ತೆ ಕೆರೆಯಂತಾಗಿದ್ದು, ಕಿಲೋಮೀಟರ್‌ಗಟ್ಟಲೇ ನಿಂತಿರೋ ನೀರಿನಲ್ಲಿ ವಾಹನ ಸವಾರರ ಪರದಾಡಿದರು. ಒಂದು ತಾಸಿನ ಮಳೆಗೆ ಬ್ರ‍್ಯಾಂಡ್ ಬೆಂಗಳೂರು ಅಸಲಿಯತ್ತು ಅನಾವರಣಗೊಂಡಿದೆ. ಕುಮಾರಸ್ವಾಮಿ ಲೇಔಟ್ ರಸ್ತೆಯಲ್ಲಿ ನೀರು ನಿಂತಿದ್ದ ಕಾರಣ ಆಟೋದ ಮುಂದಿನ ಚಕ್ರ ಗುಂಡಿಗೆ ಬಿದ್ದು ಆಟೋ ಚಾಲಕ ಒದ್ದಾಡಿದ್ದಾರೆ. ಇದನ್ನೂ ಓದಿ: ತೆಲುಗಿಗೆ ‘ಕಾಂತಾರ’ ಲೀಲಾ- ‘ಮೂಡ್ ಆಫ್ ತಮ್ಮುಡು’ ಚಿತ್ರದ ಟೀಸರ್ ಔಟ್

ಇನ್ನು ಸಾಯಿ ಲೇಔಟ್‌ನ ಜನರಿಗೆ ಮತ್ತೆ ಜಲಸಂಕಷ್ಟ ಎದುರಾಗಿದೆ. ಸಣ್ಣ ಮಳೆಗೂ ಈ ರಸ್ತೆಯಲ್ಲಿ ನೀರು ನಿಲ್ಲುತ್ತಿದ್ದು, ಜನ ಹೈರಣಾಗಿದ್ದಾರೆ.

Share This Article