ಡಿನೋಟಿಫಿಕೇಶನ್‌ ಕೇಸ್‌ – ಅಧಿಕ ರಕ್ತದೊತ್ತಡ ಕಾರಣ ನೀಡಿ ಕೋರ್ಟ್‌ ವಿಚಾರಣೆಗೆ ಎಚ್‌ಡಿಕೆ ಗೈರು

Public TV
1 Min Read

ಬೆಂಗಳೂರು: ಹಲಗೇವಡೇರಹಳ್ಳಿ ನೋಟಿಫಿಕೇಶನ್ ಪ್ರಕರಣದ (Halagevaderahalli Denotification Case) ವಿಚಾರಣೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮತ್ತೊಮ್ಮೆ ಗೈರಾಗಿದ್ದಾರೆ.

ಅಧಿಕ ರಕ್ತದೊತ್ತಡ ಕಾರಣ ನೀಡಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ (Special Courts for MP/MLA) ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.

ಫೆ.16ರ ವಿಚಾರಣೆಗೆ ಕುಮಾರಸ್ವಾಮಿ ಗೈರಾಗಿದ್ದರು. ಈ ಸಂದರ್ಭದಲ್ಲಿ ಕೋರ್ಟ್‌ ವಿಚಾರಣೆಯನ್ನು ಮಾರ್ಚ್‌ 21ಕ್ಕೆ ಮುಂದೂಡಿ ಕಡ್ಡಾಯವಾಗಿ ಹಾಜರಾಗಬೇಕೆಂದು ಸೂಚಿಸಿತ್ತು. ಹಲವು ಬಾರಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಖುದ್ದು ಹಾಜರಾಗುವಂತೆ ಸೂಚಿಸಿತ್ತು.  ಇದನ್ನೂ ಓದಿ: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ : ನಟನ ನಿವಾಸಕ್ಕೆ ಫುಲ್ ಸೆಕ್ಯೂರಿಟಿ

court order law

ಕುಮಾರಸ್ವಾಮಿ ಸಿಎಂ ಆಗಿದ್ದಾಗ 2006 ರಲ್ಲಿ ಕಾನೂನು ಬಾಹಿರವಾಗಿ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿ ಬಳಿ ಸರ್ವೇ ನಂಬರ್ 128, 130 ರಲ್ಲಿ 2.24 ಎಕರೆ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಿದ್ದರು. ಈ ಡಿನೋಟಿಫಿಕೇಶನ್‌ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಚಾಮರಾಜನಗರ ಮೂಲದ ರೈತ ಮಹದೇವಸ್ವಾಮಿ ಲೋಕಾಯುಕ್ತದಲ್ಲಿ 2012ರಲ್ಲಿ ದೂರು ನೀಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು 2018ರಲ್ಲಿ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಇದನ್ನೂ ಓದಿ: ಅಮೆಜಾನ್‌ನಲ್ಲಿ 2ನೇ ಸುತ್ತಿನ ವಜಾ ಪ್ರಕ್ರಿಯೆ ಆರಂಭ – 3 ತಿಂಗಳೊಳಗೆ 27 ಸಾವಿರ ಮಂದಿ ಮನೆಗೆ

ಬಿ ರಿಪೋರ್ಟ್ ಪ್ರಶ್ನಿಸಿ ಮಹದೇವಸ್ವಾಮಿ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ದೂರು ನೀಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಿ ರಿಪೋರ್ಟ್ ವಜಾಗೊಳಿಸಿ ವಿಚಾರಣೆ ಕೈಗೆತ್ತಿಕೊಂಡು ವಿಚಾರಣೆಗೆ ಖುದ್ದು ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿತ್ತು.

Share This Article
Leave a Comment

Leave a Reply

Your email address will not be published. Required fields are marked *