ವಾಕ್ ಸ್ವಾತಂತ್ರ್ಯವಿದೆ ಎಂದು ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡ್ತಾರೆ: ಹಾಲಪ್ಪ ಆಚಾರ್

Public TV
1 Min Read

ರಾಯಚೂರು: ದೇಶದಲ್ಲಿ ವಾಕ್ ಸ್ವಾತಂತ್ರ್ಯವಿದೆ ಎಂದು ಬಾಯಿಗೆ ಬಂದಂತೆ ಮಾತನಾಡ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ತಿರುಗೇಟು ನೀಡಿದ್ದಾರೆ.

ರಾಯಚೂರು ಜಿಲ್ಲಾ ನೂತನ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ ಶಿಶು ತೀವ್ರ ಚಿಕಿತ್ಸಾ ಘಟಕ ಹಾಗೂ 20 ಕೆ.ಎಲ್ ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟನೆ ಮಾಡಿದರು. ಇದನ್ನೂ ಓದಿ: ಹೊಸ ಸಂಸತ್ ಭವನ ನಿರ್ಮಾಣದ ಸ್ಥಳಕ್ಕೆ ರಾತ್ರಿ ದಿಢೀರ್ ಭೇಟಿ ಕೊಟ್ಟ ಮೋದಿ

ಬಿಜೆಪಿ ಕೋಮುವಾದಿಗಳು ಅನ್ನೋ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಗಳಾಗಿದ್ದವರು. ದೇಶದಲ್ಲಿ ವಾಕ್ ಸ್ವಾತಂತ್ರ್ಯವಿದೆ ಎಂದು ಬಾಯಿಗೆ ಬಂದಂತೆ ಮಾತನಾಡ್ತಾರೆ. ಅವರು ಏನೂ ಮಾತನಾಡ್ತಾರೆ ಎಂದು ನಾವು ಮಾತನಾಡೋಕೆ ಆಗಲ್ಲ ಎಂದು ತಿರುಗೇಟು ನೀಡಿದ್ದಾರೆ.

ಶೀಘ್ರದಲ್ಲಿ ಹೊಸ ಮರಳು ನೀತಿ ಜಾರಿಗೆ ತಂದು ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕುತ್ತೇವೆ. ಮರಳು ಸರಳೀಕರಣ ನೀತಿ ಅಧಿವೇಶನದ ಮುಂದಿದೆ. ಒಪ್ಪಿಗೆ ಸಿಕ್ಕ ಕೂಡಲೇ ಜಾರಿಯಾಗುತ್ತೆ. ನೀತಿ ಜಾರಿಯಾದ ಕೂಡಲೇ ಬಹಳ ಸುಧಾರಣೆಯಾಗಿ ಅಕ್ರಮಗಳಿಗೆ ಕಡಿವಾಣ ಬೀಳುತ್ತದೆ ಎಂದು ಭರವಸೆ ನೀಡಿದರು. ಅದು ಅಲ್ಲದೇ ನೇರವಾಗಿ ಗ್ರಾಹಕರಿಗೆ ಮರಳು ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಎಸಿಬಿ ಬಲೆಗೆ ಬಿದ್ದ ಗುಡಸ ಗ್ರಾಮ ಪಂಚಾಯತ್ ಗುಮಾಸ್ತ

Share This Article
Leave a Comment

Leave a Reply

Your email address will not be published. Required fields are marked *