ಡಿಸೆಂಬರ್ 1 ರಿಂದ ಬೆಳೆಹಾನಿ ಪರಿಹಾರ ವಿತರಣೆ: ಹಾಲಪ್ಪ ಆಚಾರ್

Public TV
1 Min Read

ರಾಯಚೂರು: ಕಳೆದ ಒಂದು ವಾರದಿಂದ ಸುರಿದ ಮಳೆಗೆ ಹಾನಿಯಾಗಿರುವ ಬೆಳೆ ಸರ್ವೇ ಕಾರ್ಯ ನವೆಂಬರ್ 30ರೊಳಗೆ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಡಿಸೆಂಬರ್ 1 ರಿಂದ ರೈತರಿಗೆ ಪರಿಹಾರ ನೀಡಬೇಕು ಅಂತ ಕಠಿಣವಾಗಿ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.

ಬೆಳೆಹಾನಿ ಪರಿಹಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತ ನಾಶವಾಗಿದೆ. ಒಟ್ಟು 49,953 ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದರಿಂದ ಈ ವರ್ಷ ಮಳೆಯಿಂದಾಗಿ ರೈತರು ಬೆಳೆ ಮುಟ್ಟದಂತಹ ಪರಿಸ್ಥಿತಿಯಿದೆ. ಅದಕ್ಕೆ ಈ ಕುರಿತು ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಪರಿಹಾರಕ್ಕೆ ಮನವಿ ಮಾಡಿದ್ದೇವೆ ಎಂದರು. ಇದನ್ನೂ ಓದಿ: ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಒಂದೇ ಮತ, ಒಂದೇ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

ಬೆಳೆಹಾನಿಯಿಂದಾಗಿ ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆ ಮೃತ ರೈತರ ಕುಟುಂಬಗಳನ್ನು ನಾವು ಇಂದು ಭೇಟಿ ಮಾಡಿ ಸಾಂತ್ವನ ಹೇಳುತ್ತೇವೆ. ನಂತರ ಸರ್ಕಾರಿಂದ ಏನೆಲ್ಲಾ ಪರಿಹಾರ ನೀಡಬೇಕು ಅದನ್ನು ಮಾಡುತ್ತೇವೆ ಎಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, 100ಕ್ಕೆ 100ರಷ್ಟು ನಾವೇ ಗೆಲ್ಲುತ್ತೇವೆ. ಗ್ರಾಮ ಪಂಚಾಯತಿ ಸೇರಿ ಒಟ್ಟು 6 ಸಾವಿರ ಮತದಾರರಿದ್ದಾರೆ. ನಾವು ಸಂಘಟನಾತ್ಮಕವಾಗಿದ್ದೇವೆ. ಅದಕ್ಕೆ ನಮ್ಮ ಅಭ್ಯರ್ಥಿಯೇ ಗೆಲ್ಲುತ್ತಾರೆ. ನಮ್ಮ ನಾಯಕರು ಸೂಚಿಸುವ ಅಭ್ಯರ್ಥಿ ಗೆಲ್ಲಿಸೋದು ನಮ್ಮ ಗುರಿ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *