ಅಪಘಾತಕ್ಕೆ ಸಹೋದರ ಬಲಿ- ದುಃಖ ತಾಳಲಾರದೆ ವಿಕಲಚೇತನ ಅಣ್ಣ ಆತ್ಮಹತ್ಯೆ

Public TV
0 Min Read

ಹಾಸನ: ರಸ್ತೆ ಅಪಘಾತದಲ್ಲಿ ತಮ್ಮ ಮೃತಪಟ್ಟ ಕಾರಣ ದುಃಖವನ್ನು ತಾಳಲಾರದೆ ಅಣ್ಣ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕು ಬಂಟೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜುಲೈ 3 ರಂದು ತಮ್ಮ ಚಂದ್ರು(21) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು. ಸೋದರನ ಅಗಲಿಕೆಯಿಂದ ಮನನೊಂದ ಅಣ್ಣ ಮಂಜುನಾಥ್(23) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಕಲಾಂಗರಾಗಿದ್ದ ಮಂಜುನಾಥ್ ಅವರ ಮೃತದೇಹ ಇಂದು ಪತ್ತೆಯಾಗಿದೆ. ಸದ್ಯ ಇಬ್ಬರೂ ಗಂಡು ಮಕ್ಕಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *