16,356 ತೆಂಗಿನ ಕಾಯಿ ಒಡೆದು ಹರಕೆ ತೀರಿಸಿದ ರೆಡ್ಡಿ ಆಪ್ತ

Public TV
1 Min Read

ಬಳ್ಳಾರಿ: ನಗರದ ಶಾಸಕ ಸೋಮಶೇಖರ್ ರೆಡ್ಡಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ 16,356 ಮತಗಳಿಂದ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಅವರ ಆಪ್ತ ದೇವರಿಗೆ 16,356 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ್ದಾರೆ.

ಇಂದು ಸೋಮಶೇಖರ್ ರೆಡ್ಡಿ ಅವರ 54ನೇ ವರ್ಷದ ಹುಟ್ಟುಹಬ್ಬ. ಹೀಗಾಗಿ ಇಂದು ಜನಾರ್ದನ ರೆಡ್ಡಿ ಹಾಗೂ ಸೋಮಶೇಖರ್ ರೆಡ್ಡಿ ಅವರು ಕೋಟೆ ಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ರೆಡ್ಡಿ ಆಪ್ತ ಪಾಲಣ್ಣ 16,356 ತೆಂಗಿನಕಾಯಿ ಒಡೆದು ಹರಕೆ ಸಲ್ಲಿಕೆ ಮಾಡಿದ್ದಾರೆ.

ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸೋಮಶೇಖರ್ ರೆಡ್ಡಿ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಬಹುದು. ಮಧ್ಯಂತರ ಚುನಾವಣೆ ಬಂದರೆ ಬಿಜೆಪಿಗೆ ಬಹುಮತ ಬರಲಿದೆ. 26 ಲೋಕಸಭಾ ಕ್ಷೇತ್ರಗಳ, 175 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಹುಮತ ಬಂದಿದೆ. ಹೀಗಾಗಿ ಈಗಿರುವ ಪರಿಸ್ಥಿತಿ ನೋಡಿದರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಬಹುದು ಎಂದು ಹೇಳಿದ್ದಾರೆ.

ಈ ಸರ್ಕಾರ ಇದೇಯೋ ಇಲ್ಲವೋ ಗೊತ್ತಾಗುತ್ತಿಲ್ಲ. ಅಧಿಕಾರಿಗಳು ಯಾರ ಮಾತು ಕೇಳುತ್ತಿಲ್ಲ. ಜೊತೆಗೆ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಸೋಮಶೇಖರ್ ರೆಡ್ಡಿ ಕಿಡಿಕಾರಿದರು.

ನಾಳೆಯಿಂದ(ಶನಿವಾರ) ಶಾಸಕ ಸೋಮಶೇಖರ್ ರೆಡ್ಡಿ ಉಪವಾಸ ಸತ್ಯಾಗ್ರಹ ಆರಂಭ ಮಾಡಲಿದ್ದಾರೆ. ಮಳೆ ಬಂದು ತುಂಗಭದ್ರಾ ಡ್ಯಾಂ ತುಂಬುವವರೆಗೂ ಉಪವಾಸ ವ್ರತ ಆಚರಣೆ ಮಾಡಲಿದ್ದಾರೆ. ನಾಳೆ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಉಪವಾಸ ಆರಂಭಿಸಲಿದ್ದಾರೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Share This Article
Leave a Comment

Leave a Reply

Your email address will not be published. Required fields are marked *