ಹರ್ಭಜನ್ ಆಯ್ಕೆಯ ವಿಶ್ವಕಪ್ ತಂಡದಲ್ಲಿ ರಾಹುಲ್, ಪಂತ್‍ಗಿಲ್ಲ ಸ್ಥಾನ

Public TV
1 Min Read

ಮುಂಬೈ: 2019ರ ವಿಶ್ವಕಪ್ ಟೂರ್ನಿಯ ಸಿದ್ಧತೆಯಲ್ಲಿರುವ ಟೀಂ ಇಂಡಿಯಾಗೆ 15 ಆಟಗಾರರನ್ನು ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಕಾರ್ಯ ಪ್ರವೃತ್ತವಾಗಿದೆ. ಈ ವೇಳೆಯಲ್ಲೇ ಅನುಭವಿ ಆಟಗಾರ ಹರ್ಭಜನ್ ಸಿಂಗ್ ತಮ್ಮ ಕನಸಿನ ತಂಡದ ಆಯ್ಕೆ ಮಾಡಿ ಕುತೂಹಲ ಮೂಡಿಸಿದ್ದಾರೆ.

ಹರ್ಭಜನ್ ಸಿಂಗ್ ಆಯ್ಕೆ ಮಾಡಿರುವ ತಂಡದಲ್ಲಿ ಪ್ರಮುಖವಾಗಿ ಉಮೇಶ್ ಯಾದವ್, ರವೀಂದ್ರ ಜಡೇಜಾ, ವಿಜಯ್ ಶಂಕರ್ ಅವರಿಗೆ ಸ್ಥಾನ ನೀಡಲಾಗಿದೆ. ಆದರೆ ಕನ್ನಡಿಗ ಕೆಎಲ್ ರಾಹುಲ್, ಯುವ ಆಟಗಾರ ರಿಷಬ್ ಪಂತ್ ಅವರಿಗೆ ಸ್ಥಾನ ನೀಡಿಲ್ಲ.

ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ವಿಜಯ್ ಶಂಕರ್ ಉತ್ತಮ ಪ್ರದರ್ಶನ ನೀಡಿ ಗಮನಸೆಳೆದರೆ, ಹಾರ್ದಿಕ್ ಪಾಂಡ್ಯ ಅಲೌಂಡರ್ ಸ್ಥಾನವನ್ನು ತುಂಬಿದ್ದಾರೆ. ಇಂಗ್ಲೆಂಡ್ ಪ್ರವಾಸದ ವೇಳೆ ಕಳೆದ ಬಾರಿ ವಾತಾವರಣ ಹೆಚ್ಚು ಬಿಸಿಯಿಂದ ಕೂಡಿದ್ದು, ಪಿಚ್ ವರ್ತನೆಯ ಉದ್ದೇಶದಿಂದ ಜಡೇಜಾ ಆಯ್ಕೆ ಉತ್ತಮ ಹಾಗು ತಂಡಕ್ಕೆ ಮತ್ತೊಬ್ಬ ಅಲೌಂಡರ್ ಲಭ್ಯರಾಗಲಿದ್ದಾರೆ ಎಂದು ಹರ್ಭಜನ್ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ತಂಡ ಇಂತಿದೆ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಅಂಬಟಿ ರಾಯುಡು, ಎಂಎಸ್ ಧೋನಿ, ಕೇದರ್ ಜಾಧವ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಯಜುವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ದಿನೇಶ್ ಕಾರ್ತಿಕ್, ಉಮೇಶ್ ಯಾದವ್, ವಿಜಯ್ ಶಂಕರ್. ಸಂಭನೀಯ: ರವೀಂದ್ರ ಜಡೇಜಾ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *