ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್ ಪಟೇಲ್ ಶೀಘ್ರವೇ ಬಿಜೆಪಿಗೆ ಸೇರ್ಪಡೆ

Public TV
1 Min Read

ಗಾಂಧೀನಗರ: ಗುಜರಾತ್ ಕಾಂಗ್ರೆಸ್‍ನ ಮಾಜಿ ಕಾರ್ಯಾಧ್ಯಕ್ಷ ಮತ್ತು ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಜೂನ್ 2ರಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಲಿದ್ದಾರೆ.

ಪಶ್ಚಿಮ ರಾಜ್ಯದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ಬಿಜೆಪಿ ಸೇರುತ್ತಿರುವ ಹಾರ್ದಿಕ್ ಪಟೇಲ್ ಅವರ ನಿರ್ಧಾರವು ಗುಜರಾತ್ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿಯೇ ಮಹತ್ವ ಪಡೆದುಕೊಂಡಿದೆ.

ಕೆಲವು ದಿನಗಳಿಂದ ಹಾರ್ದಿಕ್ ಪಟೇಲ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿತ್ತು. ಆದರೆ ಈ ಊಹಾಪೋಹಗಳನ್ನು ನಿರಾಕರಿಸಿ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಬಗ್ಗೆ ಆಮ್ ಆದ್ಮಿ ಪಕ್ಷದ ವಿರುದ್ಧ ಕಿಡಿಕಾರಿದ್ದರು. ನಾನು ಬಿಜೆಪಿ ಸೇರುವುದಿಲ್ಲ. ಒಂದು ವೇಳೆ ಸೇರಿದರೆ ನಿಮಗೆ ತಿಳಿಸುತ್ತೇನೆ ಎಂದು ಭಾನುವಾರ ಹೇಳಿದ್ದರು. ಇದನ್ನೂ ಓದಿ: ಪಠ್ಯದಲ್ಲಿ ಬಸವಣ್ಣನ ವಿಚಾರಕ್ಕೆ ಧಕ್ಕೆ – ಪಂಡಿತಾರಾದ್ಯ ಶ್ರೀಗಳಿಂದ ಹೋರಾಟದ ಎಚ್ಚರಿಕೆ

ಇದೀಗ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ಹಾರ್ದಿಕ್ ಪಟೇಲ್ ಅವರು, ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ. ಜೊತೆಗೆ ಪಕ್ಷವು ದೇಶದಲ್ಲಿನ ಕೆಲವು ಪ್ರಮುಖ ವಿಷಯಗಳ ಬಗ್ಗೆ ತಡೆಹಿಡಿಯುವ ಪಾತ್ರವನ್ನು ಮಾತ್ರ ವಹಿಸಿದೆ ಮತ್ತು ಎಲ್ಲವನ್ನು ವಿರೋಧಿಸುವ ಮಟ್ಟಕ್ಕೆ ಇಳಿದಿದೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *