ಡಿಕೆಶಿ ಹೇಳುವುದು ಒಂದು, ಮಾಡುವುದು ಇನ್ನೊಂದು: ನಾರಾಯಣಗೌಡ

By
1 Min Read

ಬೆಂಗಳೂರು: ಡಿ.ಕೆ ಶಿವಕುಮಾರ್ ಅವರು ಕಾರ್ಯಕರ್ತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಆದರೆ ಅವರು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂದು ಡಿ.ಕೆ ಶಿವಕುಮಾರ್ ಅವರಿಗೆ ರೇಷ್ಮೆ ಮತ್ತು ಯುವಜನ ಸೇವಾ ಕ್ರೀಡಾ ಸಚಿವ ಸಚಿವ ಕೆ.ಸಿ.ನಾರಾಯಣಗೌಡ ತಿರುಗೇಟು ನೀಡಿದರು.

ಸಿಎಂ ಭೇಟಿ ಬಳಿಕ ಮಾತನಾಡಿದ ಅವರು, ಈಶ್ವರಪ್ಪರ ಮೇಲೆ 144 ಸೆಕ್ಷನ್ ಉಲ್ಲಂಘನೆ ಆರೋಪ ವಿಚಾರವಾಗಿ ಸಮರ್ಥಿಸಿಕೊಂಡರು. ಹರ್ಷ ಪಕ್ಷದ ಕಾರ್ಯಕರ್ತ. ಹಾಗಾಗಿ ಸಚಿವ ಈಶ್ವರಪ್ಪ ಅವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಡಿಕೆಶಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲವಾ ಎಂದು ವಾಗ್ದಾಳಿ ನಡೆಸಿದರು.

ಹರ್ಷ ಕೊಲೆ ಪ್ರಕರಣ ಎನ್‍ಐಎಗೆ ವಹಿಸುವ ವಿಚಾರವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ. ಮತ್ತೆ ಇಂತಹ ಘಟನೆ ಆಗಬಾರದು ಅಷ್ಟೇ ಎಂದು ಹೇಳಿದರು. ಇದನ್ನೂ ಓದಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಕಹಳೆ – ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧ ಹೇರಿದ ಅಮೆರಿಕ!

ಶಿವಮೊಗ್ಗ ವಾತಾವರಣ ಕಂಟ್ರೋಲ್‍ನಲ್ಲಿದೆ. ಗೃಹ ಸಚಿವರನ್ನು ಭೇಟಿ ಮಾಡಿ ಬಂದೆ. ಒಂದೊಂದು ಗಂಟೆಗೂ ಮಾಹಿತಿ ಪಡೆಯುತ್ತಿದ್ದೇವೆ. ಗಲಭೆ ನಡೆದಿರುವ ಬಗ್ಗೆ ವೀಡಿಯೋ ರೆಕಾರ್ಡ್ ಸಿಕ್ಕಿವೆ. ನಿನ್ನೆ ಬೆಳಿಗ್ಗೆ ಐದು ಗಂಟೆಗೆ ಎರಡು ಆಟೋಗಳು ಸುಟ್ಟು ಹಾಕಿದ್ದಾರೆ. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ಗೊತ್ತಾಗಿದೆ. ತನಿಖೆ ನಡೆಸುವ ಸಂದರ್ಭದಲ್ಲಿ ಈ ಮಾಹಿತಿ ಸೀಕ್ರೆಟ್ ಆಗಿ ಇಟ್ಟಿದ್ದೇವೆ ಎಂದರು. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

Share This Article
Leave a Comment

Leave a Reply

Your email address will not be published. Required fields are marked *