ಜನಸಾಮಾನ್ಯರೊಂದಿಗೆ ಕುಣಿದು ಕುಪ್ಪಳಿಸಿದ ತಹಶೀಲ್ದಾರ್

Public TV
1 Min Read

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಹಶೀಲ್ದಾರ್ ಜನಸಾಮಾನ್ಯರೊಂದಿಗೆ ಬೆರೆತು ಡ್ಯಾನ್ಸ್ ಮಾಡುವ ಮೂಲಕ ನೆರೆದಿದ್ದವರನ್ನು ಸಂತೋಷ ಪಡಿಸಿದ್ದಾರೆ.

ಸಾಮಾನ್ಯ ಜನರೊಂದಿಗೆ ಬೆರೆಯುವ ಮೂಲಕ ಸರ್ಕಾರಿ ಅಧಿಕಾರಿಗಳು ಕೂಡ ಸಾಮಾನ್ಯರಲ್ಲಿ ಬೆರೆಯಬೇಕು ಎನ್ನುವುದನ್ನು ತಹಶೀಲ್ದಾರ್ ಶ್ರೀನಿವಾಸ್ ತೋರಿಸಿಕೊಟ್ಟಿದ್ದಾರೆ. ಹೊಳೆನರಸೀಪುರ ದಲ್ಲಿ ಆಯೋಜಿಸಲಾಗಿದ್ದ ಕನಕ ಜಯಂತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರಿದ್ದರು. ಕನಕದಾಸರ ಭಾವಚಿತ್ರದ ಜೊತೆ ಪಟ್ಟಣದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಬ್ಯಾಂಡ್ ಸೆಟ್‍ನೊಂದಿಗೆ ಮೆರವಣಿಗೆ ಸಾಗಿತ್ತು. ಯುವಕರ ತಂಡಗಳು ಡ್ಯಾನ್ಸ್ ಮಾಡುತ್ತಾ ಅದ್ಧೂರಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಸ್ಥಳದಲ್ಲಿ ಇದ್ದ ತಹಶೀಲ್ದಾರ್ ರನ್ನು ಯುವಕರು ನೃತ್ಯಕ್ಕೆ ಮಾಡುವಂತೆ ಕೇಳಿಕೊಂಡಿದ್ದಾರೆ. ಇದಕ್ಕೆ ತಕ್ಷಣ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ಶ್ರೀನಿವಾಸ್ ಎಲ್ಲರೊಂದಿಗೆ ಡ್ಯಾನ್ಸ್ ಮಾಡಿ ಗಮನಸೆಳೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *