20 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳರ ಬಂಧನ – 22 ಲಕ್ಷ ಮೌಲ್ಯದ ಚಿನ್ನಾಭರಣ ವಶ

Public TV
1 Min Read

ಹಾಸನ: ಮೂವರು ಅಂತರಜಿಲ್ಲಾ ಮನೆಗಳ್ಳರನ್ನು ಬಂಧಿಸಿರುವ ಹಾಸನ ಪೊಲೀಸರು, ಬಂಧಿತರಿಂದ ಸುಮಾರು 33 ಲಕ್ಷ ಬೆಲೆಯ ಚಿನ್ನಾಭರಣ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಫಯಾದ್ ಅಹಮದ್, ಸೈಯದ್ ನಾಸೀರ್, ಕೇಶವ ಎಂದು ಗುರುತಿಸಲಾಗಿದೆ. 2019ರ ಡಿಸೆಂಬರ್ ತಿಂಗಳಲ್ಲಿ ಸಕಲೇಶಪುರ ತಾಲೂಕಿನ, ಹಾನಬಾಳು ಗ್ರಾಮದ ಹರಿಪ್ರಸಾದ್ ಅವರ ಮನೆಯಲ್ಲಿ ಕಳ್ಳತನವಾಗಿತ್ತು. ಈ ಬಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ ಪೊಲೀಸರು, ವಿವಿಧ ಜಿಲ್ಲೆಗಳಲ್ಲಿ ಮನೆಗಳ್ಳತನ ಮಾಡಿ ಸುಮಾರು 20 ಪ್ರಕರಣದಲ್ಲಿ ಬೇಕಾಗಿದ್ದ ಮೂವರು ಕಳ್ಳರನ್ನು ಬಂಧಿಸಿದ್ದಾರೆ. ಪ್ರಕರಣವನ್ನು ಬೇಧಿಸಿದ ಹಾಸನ ಪೊಲೀಸರ ಬಗ್ಗೆ ಮಂಡ್ಯ ಎಸ್‍ಪಿ ಶ್ರೀನಿವಾಸ್‍ಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *