ರೀಓಪನ್ ಆದಾಗ ಸ್ಟಾಕ್ ಹೋಲಿಕೆ ಆಗದಿದ್ರೆ ಮದ್ಯದಂಗಡಿ ಲೈಸೆನ್ಸ್ ರದ್ದು: ಮಾಧುಸ್ವಾಮಿ

Public TV
1 Min Read

ಹಾಸನ: ಹಾಸನ ಸುತ್ತಲಿನ ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್ ಇರುವುದರಿಂದ, ಹಾಸನದ ಸುತ್ತ ಎಲ್ಲ ಕಡೆ ಸಂಪರ್ಕ ಕಡಿತ ಮಾಡಲು ಕಟ್ಟುನಿಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಾಸನದಲ್ಲಿ ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಇಂದು ನಗರದಲ್ಲಿ ಮಾತನಾಡಿದ ಅವರು, ಜನ ಎಷ್ಟು ಹೇಳಿದರೂ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಮಧ್ಯಾಹ್ನ ಎರಡು ಗಂಟೆಯವರೆಗೆ ಮಾತ್ರ ಶಾಪ್‍ಗಳನ್ನು ಓಪನ್ ನಂತರ ಕ್ಲೋಸ್ ಮಾಡಿಸಲಾಗುವುದು. ಮೆಡಿಕಲ್ ಸ್ಟೋರ್ ಮತ್ತು ಅಗತ್ಯ ವಸ್ತು ಬಿಟ್ಟು ಎಲ್ಲವನ್ನೂ ಕಡ್ಡಾಯವಾಗಿ ಕ್ಲೋಸ್ ಮಾಡಬೇಕು ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಸನ ಮಾರುಕಟ್ಟೆಯನ್ನು ಮೈದಾನಗಳಿಗೆ ಶಿಫ್ಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜೊತೆಗೆ ಯಾವುದೇ ವೈದ್ಯರು ರಜೆ ತೆಗೆದುಕೊಳ್ಳಬಾರದು. ಯಾವ ವೈದ್ಯರೂ ರೋಗಿಗಳನ್ನು ರಿಜೆಕ್ಟ್ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮದ್ಯದಂಗಡಿಗಳ ಸ್ಟಾಕ್ ಮೇಲೆ ನಿಗಾ ಇಡಲಾಗಿದ್ದು, ರೀ ಓಪನ್ ಆದಾಗ ಸ್ಟಾಕ್ ಪ್ರಮಾಣ ಈಗ ಇರುವ ಸ್ಟಾಕ್‍ಗೆ ಹೋಲಿಕೆ ಆಗಬೇಕು. ಇಲ್ಲದಿದ್ದರೆ ಮದ್ಯದಂಗಡಿಗಳ ಲೈಸೆನ್ಸ್ ರದ್ದುಪಡಿಸುವುದಾಗಿ ಸಚಿವರು ಎಚ್ಚರಿಕೆ ನೀಡಿದರು.

ರಸ್ತೆ ಮೇಲೆ ಬರೀ ಟೂ ವ್ಹೀಲರ್ ಕಾಣುತ್ತಿವೆ. ಹೀಗಾಗಿ ಪೆಟ್ರೋಲ್ ಬಂಕ್ ಕಾರ್ಯನಿರ್ವಹಣೆಯಲ್ಲಿ ಬದಲಾವಣೆ ಮಾಡಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *