ಹಣ ಪಡೆದು ಬೇರೆ ಪಕ್ಷಕ್ಕೆ ಹೋಗೋದು ತಪ್ಪು – ಪ್ರಜ್ವಲ್ ರೇವಣ್ಣ

Public TV
1 Min Read

ಹಾಸನ: ರೆಬೆಲ್ ಶಾಸಕರು ಹಣ ಮತ್ತು ಅಧಿಕಾರಕ್ಕಾಗಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಹಣ ಪಡೆದು ಬೇರೆ ಪಕ್ಷಕ್ಕೆ ಹೋಗೋದು ತಪ್ಪು ಎಂದು ಅತೃಪ್ತ ಶಾಸಕರ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ ಮಾಡಿದ್ದಾರೆ.

ಇಂದು ನಗರದಲ್ಲಿ ಮಾತನಾಡಿದ ಅವರು, ಅನರ್ಹ ವಿಚಾರದಲ್ಲಿ ಸ್ಪೀಕರ್ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ. ಮುಂದಿನ ದಿನಗಳಲ್ಲಿ ಜನರು ಅತೃಪ್ತರಿಗೆ ತಕ್ಕ ಪಾಠ ಕಲಿಸುತ್ತಾರೆ. ಮುಂದಿನ 6 ತಿಂಗಳಲ್ಲಿ ಚುನಾವಣೆ ನಡೆಯಲಿದೆ ಆಗ ಅವರಿಗೆ ಜನರು ಉತ್ತರ ನೀಡಲಿದ್ದಾರೆ ಎಂದು.

ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಸಮ್ಮಿಶ್ರ ಸರ್ಕಾರ ಪತನಕ್ಕೆ ತಂದೆ ರೇವಣ್ಣ ಕಾರಣ ಎಂಬ ಆರೋಪ ಸುಳ್ಳು. ಲೋಕೋಪಯೋಗಿ ಇಲಾಖೆಯಲ್ಲಿ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂಬ ಆರೋಪ ಕುರಿತು ದಾಖಲೆ ಬಿಡುಗಡೆ ಮಾಡಲು ಸಿದ್ಧ ಎಂದು ತಿಳಿಸಿದರು.

ಸದ್ಯಕ್ಕೆ ಬಿಜೆಪಿಯವರು ಸರ್ಕಾರ ರಚನೆ ಮಾಡಿದ್ದಾರೆ. ಅಲ್ಲೂ ಕೂಡ ಸಮಸ್ಯೆ ಇಲ್ಲದೇ ಇಲ್ಲ. ಅವರು ಸರ್ಕಾರ ಎಷ್ಟು ದಿನ ನಡೆಸುತ್ತಾರೋ ನೋಡೋಣ. ಲೋಕಸಭೆ ಚುನಾವಣೆಯಲ್ಲಿ ಸುಳ್ಳು ಅಫಿಡವಿಟ್ ಪ್ರಕರಣ ನನಗೆ ನ್ಯಾಯಾಲಯದಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದ ಪ್ರಜ್ವಲ್ ಸ್ಪಷ್ಟಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *