ಬಾಕಿ ವೇತನ ಪಾವತಿಗೆ ಒತ್ತಾಯ: ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಂದ ಪ್ರತಿಭಟನೆ

Public TV
1 Min Read

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಕಂಪನಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಬಾಕಿ ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಹಟ್ಟಿ ಚಿನ್ನದ ಗಣಿ ಕಂಪನಿಯ ಹೊರಗುತ್ತಿಗೆ ಕಾರ್ಮಿಕರಿಗೆ ಮೂರು ತಿಂಗಳಿಂದ ವೇತನ ನೀಡದೆ ಇರುವುದರಿಂದ ಕೆಲಸಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದ್ದಾರೆ. ಗುತ್ತಿಗೆ ಪಡೆದ ಸಿಐಎಸ್ ಬಿ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಮಿಕರು ಸಂಬಳಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದಶಪಥ ರಸ್ತೆ ಕಾಮಗಾರಿ ವೀಡಿಯೋ ಇಷ್ಟು ಜನರ ಹೊಟ್ಟೆಗೆ ಬೆಂಕಿ ಬೀಳಿಸುತ್ತೆ ಅಂತಾ ಗೊತ್ತಿರಲಿಲ್ಲ: ಪ್ರತಾಪ್ ಸಿಂಹ ತಿರುಗೇಟು

ಮೂಲ ಸೌಕರ್ಯಗಳು, ಅಗತ್ಯ ಸಲಕರಣೆಗಳಿಲ್ಲದೆ ಕಂಪನಿ ಕಾರ್ಮಿಕರನ್ನ ದುಡಿಸಿಕೊಳ್ಳುತ್ತಿದೆ ಅಂತ ಗುತ್ತಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ಉತ್ತರಾರಾಧನೆ

Share This Article
Leave a Comment

Leave a Reply

Your email address will not be published. Required fields are marked *