– ಕಾರಿಗೆ ಬಸ್ ಡಿಕ್ಕಿ ಇಬ್ಬರು ಮಹಿಳೆಯರು ಸಾವು, ಮೂವರಿಗೆ ಗಾಯ
ಹಾವೇರಿ: ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹಾನಗಲ್ ತಾಲೂಕಿನ ಗೆಜ್ಜೀಹಳ್ಳಿ ಗ್ರಾಮದ ಬಳಿ ನಡೆದಿದೆ.
ಹಾವೇರಿ ತಾಲೂಕು ಕನವಳ್ಳಿ ಗ್ರಾಮದ ಶಾಯಿನಾಬಾನು (33), ಮತ್ತು ಮುಸ್ಕಾನ್ (24) ಮೃತ ದುರ್ದೈವಿಗಳು. ಅಬ್ದುಲ್ ಖಾದರ್ (48), ಆಸ್ಪಖ್ (23) ಹಾಗೂ ಡ್ಯಾನಿಷ್ (17) ಗಾಯಾಳುಗಳು. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆಗಿದ್ದೇನು?:
ಕನವಳ್ಳಿ ಗ್ರಾಮದ ಅಬ್ದುಲ್ ಖಾದರ್ ಕುಟುಂಬ ಸಮೇತ ಸಂಬಂಧಿಕರ ಮನೆಯ ಕಾರ್ಯಕ್ರಮದ ನಿಮಿತ್ತ ಹಾನಗಲ್ಗೆ ಹೊರಟಿದ್ದರು. ಗೆಜ್ಜೀಹಳ್ಳಿ ಗ್ರಾಮದ ಬಳಿ ಕಾರು ಬರುತ್ತಿದ್ದಂತೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳದಲ್ಲಿ ಸೇರಿದ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಕಾರು ಚಾಲಕ ವೇಗವಾಗಿ ಬಂದಿದ್ದರಿಂದಲೇ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಹಾನಗಲ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೆÇಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv