15 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿ- ತಪ್ಪಿದ ಭಾರೀ ಅನಾಹುತ

Public TV
1 Min Read

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ 15 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿಯಾದ ಘಟನೆ ಹಿರೇಕೆರೂರು ತಾಲೂಕಿನ ನೂಲಗೇರಿ ಗ್ರಾಮದ ಬಳಿ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅವರಿಗೆ ಸಂಬಂಧಿಸಿದ ಕೌರವ ಶಿಕ್ಷಣ ಸಂಸ್ಥೆಗೆ ಸೇರಿರುವ ಶಾಲಾ ಬಸ್ ಇದಾಗಿದೆ. ಬಸ್‍ನಲ್ಲಿದ್ದ 15 ಜನರ ಪೈಕಿ 8 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಯಾಣ ಹಾನಿ ಸಂಭವಿಸಿಲ್ಲ.

ಸುಮಾರು 20 ವಿದ್ಯಾರ್ಥಿಗಳನ್ನು ಮಂಗಳವಾರ ಸಂಜೆ ಶಾಲೆ ಬಿಟ್ಟ ನಂತರ ಮನೆ ಡ್ರಾಪ್ ಮಾಡಲಾಗುತ್ತಿತ್ತು. ಸಮೀಪದ ಗ್ರಾಮದ ಮಕ್ಕಳನ್ನು ಬಿಟ್ಟು, ನೂಲಗೇರಿ ಸುತ್ತಮುತ್ತಲಿನ ಗ್ರಾಮದ ಮಕ್ಕಳ ಡ್ರಾಪ್ ಮಾಡಲು ಬಂದಾಗ ಈ ದುರ್ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆಯ ಪಕ್ಕದಲ್ಲಿ ಜಾರಿಗೊಂಡು ಹೋಗಿ ಪಲ್ಟಿಯಾಗಿದೆ.

ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹಿರೇಕೆರೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *