ಸ್ವಗ್ರಾಮಕ್ಕೆ ಆಗಮಿಸಿದ ಯೋಧರಿಗೆ ಅದ್ಧೂರಿ ಸ್ವಾಗತ

Public TV
1 Min Read

ಹಾವೇರಿ: ಬರೋಬ್ಬರಿ 17 ವರ್ಷಗಳ ಕಾಲ ಭಾರತ ಸೇನೆಯಲ್ಲಿ ದೇಶ ಸೇವೆ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ಮಾಜಿ ಯೋಧರಿಗೆ ಅದ್ಧೂರಿ ಮೆರವಣಿಗೆ ಮಾಡುವ ಮೂಲಕ ಸ್ವಾಗತ ಮಾಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿ ತಾಲೂಕಿನ ಅಗಡಿ ಗ್ರಾಮದ ಇಬ್ಬರು ಯೋಧರಾದ ಇಮ್ತಿಯಾಜ್ ಹಾವನೂರು ಮತ್ತು ಮಹೇಶ್ ಕುಂಬಾರ ಊರಿಗೆ ಮರಳಿದ ಮಾಜಿ ಯೋಧರು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಇಂದು ಇಬ್ಬರು ಯೋಧರು ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಹದಿನೇಳು ವರ್ಷ ಭಾರತೀಯ ಸೇನೆಯಲ್ಲಿ ಜಮ್ಮು-ಕಾಶ್ಮೀರ, ಶ್ರೀನಗರ, ಮಣಿಪ್ಪುರ, ನಾಗಾಲ್ಯಾಂಡ್ ಸೇರಿದಂತೆ ಹಲವೆಡೆ ಸೇವೆ ಸಲ್ಲಿಸಿದ್ದಾರೆ.

ಇವತ್ತು ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಯೋಧರನ್ನ ಗ್ರಾಮಸ್ಥರು ಹಾಗೂ ಸ್ಥಳೀಯ ಮಾಜಿ ಯೋಧರು ಸ್ವಾಗತಿಸಿದರು. ಅಲ್ಲದೆ ತೆರೆದ ವಾಹನದಲ್ಲಿ ಯೋಧರನ್ನ ಮೆರವಣಿಗೆ ಮೂಲಕ ಊರಿಗೆ ಗ್ರಾಮಸ್ಥರು ಕರೆದುಕೊಂಡು ಹೋಗಿದ್ದಾರೆ. ಸ್ಥಳೀಯ ಶಾಸಕ ನೆಹರು ಓಲೇಕಾರ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರು ಮೆರವಣಿಗೆಯಲ್ಲಿ ಭಾಗವಹಿಸಿ ಅದ್ಧೂರಿಯಾಗಿ ಸ್ವಾಗತಿಸಿದ್ದು ವಿಶೇಷವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *