ಸಚಿವ ಜಮೀರ್ ಅಹ್ಮದ್ ಕಾಣೆ- ಫೇಸ್ಬುಕ್‍ನಲ್ಲಿ ರೈತರಿಂದ ಪೋಸ್ಟ್

Public TV
1 Min Read

-ಗೋಧಿ ಬಣ್ಣ ಸಾಧಾರಣ ಮೈಕಟ್ಟು, 5 ಅಡಿ ಎತ್ತರ

ಹಾವೇರಿ: ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಮತ್ತು ನಾಗರಿಕ ಸಚಿವರಾದ ಜಮೀರ್ ಅಹ್ಮದ್ ಖಾನ್ ಕಾಣೆಯಾಗಿದ್ದಾರೆ ಎಂದು ಹಾವೇರಿ ಜಿಲ್ಲೆಯ ರೈತರು ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಜಮೀರ್ ಅಹ್ಮದ್ ಖಾನ್ ಅವರನ್ನು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಅದರೆ ತಿಂಗಳಿಗೆ ಒಂದು ಸಾರಿಯಾದರೂ ಸಚಿವರು ಜಿಲ್ಲೆಗೆ ಬಂದಿಲ್ಲ ಎಂದು ಆಕ್ರೋಶಗೊಂಡ ರೈತರು ಜಮೀರ್ ಅಹ್ಮದ್ ಕಾಣೆಯಾಗಿದ್ದಾರೆ ಎಂದು ಫೇಸ್‍ಬುಕ್‍ನಲ್ಲಿ ಹಾಕಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬಂದವರು ಮತ್ತೆ ಜಿಲ್ಲೆಗೆ ಭೇಟಿ ನೀಡಿಲ್ಲ. ಉಸ್ತುವಾರಿ ಸಚಿವರ ಕಚೇರಿಯ ಬಾಗಿಲು ಸಹ ತೆರೆದಿಲ್ಲ. ಜಿಲ್ಲೆಯ ರೈತರಿಗೆ ಅಣೂರು ಕೆರೆ ತುಂಬಿಸುವುದಾಗಿ ಭರವಸೆ ನೀಡಿದ್ದರು. ಆದರೆ ಯಾವ ಯೋಜನೆಯೂ ಜಾರಿ ಮಾಡಿಲ್ಲ. ಸಚಿವರ ಭರವಸೆ ನಂಬಿದ್ದ ರೈತರು ಜಮೀರಣ್ಣ ಕಾಣೆಯಾಗಿದ್ದಾರೆ ಎಂದು ಪೋಸ್ಟ್ ಮಾಡುವ ಮೂಲಕ ಆಕ್ರೋಶವನ್ನು ಹೊರಹಾಕಿದ್ದಾರೆ.

ಫೇಸ್‍ಬುಕ್‍ನಲ್ಲಿ ಕಾಣೆಯಾದವರ ಪ್ರಕಟಣೆ, ಹೆಸರು – ಜಮೀರ್ ಅಹ್ಮದ್, ಬಣ್ಣ-ಗೋಧಿ ಬಣ್ಣ ಸಾಧಾರಣ ಮೈಕಟ್ಟು. ಎತ್ತರ-5 ಅಡಿ ಎಂದು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಬ್ಯಾಡಗಿ ರೈತರಿಂದ ಜಮೀರ್ ಅಹ್ಮದ್ ವಿರುದ್ಧ ಫೇಸ್‍ಬುಕ್‍ನಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಇನ್ನಾದರೂ ಸಚಿವರು ಹಾವೇರಿ ಜಿಲ್ಲೆಗೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸುತ್ತಾರಾ ಕಾದುನೋಡಬೇಕಾಗಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Share This Article
Leave a Comment

Leave a Reply

Your email address will not be published. Required fields are marked *