BJP 3 ಸಿಲಿಂಡರ್ ಕೊಡ್ತೀನಿ ಅಂದಿದೆ, ನಾನು 5 ಸಿಲಿಂಡರ್ ಕೊಡ್ತೀನಿ – ಹೆಚ್‌ಡಿಕೆ

Public TV
1 Min Read

ಮಂಡ್ಯ: ಬಿಜೆಪಿ (BJP) ಅಧಿಕಾರಕ್ಕೆ ಬಂದ್ರೆ 3 ಸಿಲಿಂಡರ್ ಕೊಡ್ತೀನಿ ಅಂತಾ ಹೇಳಿದೆ. ನಮ್ಮ ಸರ್ಕಾರ ಬಂದ್ರೆ 5 ಸಿಲಿಂಡರ್ ಕೊಡ್ತೀನಿ ಅಂತಾ ಹೇಳಿರುವುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಮಂಡ್ಯದ (Mandya) ಕೆ.ಆರ್.ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ (Election Campaign) ಸಭೆಯಲ್ಲಿ ಮಾತನಾಡಿದ ಅವರು, ನಾನು ಹೇಳಿದ ಮೇಲೆ ಬಿಜೆಪಿಯವರು ಹೇಳಿದ್ದಾರೆ. ಕೊಡುವುದಿದ್ದರೇ ಸರ್ಕಾರ ಇದ್ದಾಗಲೇ ಕೊಡಬೇಕಿತ್ತು ಎಂದು ಕುಟುಕಿದ್ದಾರೆ. ಇದನ್ನೂ ಓದಿ: ನಾನ್‌ ಬೆಳಗಾವಿಗೆ ಬರ್ತಿದೀನಿ – ಮೇ 6ರಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪರ ಶಿವಣ್ಣ ಪ್ರಚಾರ..!

ದೇವೇಗೌಡರು ಆರೋಗ್ಯದ ಸಮಸ್ಯೆ ನಡುವೆ ನನ್ನ ಏಕಾಂಗಿ ಹೋರಾಟವನ್ನು ಅವರು ಗಮನಿಸಿದ್ದಾರೆ. ನನ್ನ ಮೇಲೆ ಬಿದ್ದಿರುವ ಒತ್ತಡವನ್ನು ಕಡಿಮೆ ಮಾಡಲು 3-4 ದಿನಗಳಿಂದ ತಾವೂ ಓಡಾಡುತ್ತಿದ್ದಾರೆ. ವೈದ್ಯರು ಅವರಿಗೆ ವಿಶ್ರಾಂತಿ ಬೇಕು ಅಂದಿದ್ದರಿAದ ಮತ್ತಷ್ಟು ಆರೋಗ್ಯ ಹದಗೆಟ್ಟಿತ್ತು. ಆದ್ರೆ ಮೈಸೂರಿನ ಪಂಚರತ್ನ ಸಮಾರೋಪದಲ್ಲಿ ಭಾಗಿಯಾಗಿ ಜನರನ್ನು ನೋಡಿದ ಮೇಲೆ ಅವರ ಆರೋಗ್ಯ ಸುಧಾರಿಸಿದೆ. ದೇವೇಗೌಡರು ಈ ಬಾರಿ ಪ್ರಚಾರ ಮಾಡುತ್ತಾರೆ ಅಂದುಕೊಂಡಿರಲಿಲ್ಲ. ಚಾಮುಂಡೇಶ್ವರಿ ತಾಯಿಯ ಆಶೀರ್ವಾದದಿಂದ ದೇವೇಗೌಡರು ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ: ರಮೇಶ್ ಕುಮಾರ್

ಬಹುಮತ ಬಂದ್ರೆ ರೈತರ ಸಮಸ್ಯೆ ಬಗೆಹರಿಸುತ್ತೇನೆ:
ಕಳೆದ ಮೂರು ದಿನಗಳಿಂದ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡ್ತಾ ಇದ್ದಾರೆ. ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರೋದನ್ನು ಕಾಂಗ್ರೆಸ್, ಬಿಜೆಪಿ ತಪ್ಪಿಸಲು ಸಾಧ್ಯವಿಲ್ಲ. ಪಂಚರತ್ನ ಕಾರ್ಯಕ್ರಮವನ್ನು ಜನರು ಒಪ್ಪಿ ಜೆಡಿಎಸ್ ಕೈ ಹಿಡಿಯುತ್ತಾರೆ. ರೈತರು ಕೇಳ್ತಾರೆ ಇನ್ನೊಮ್ಮೆ ನಿನ್ನ ಸಿಎಂ ಮಾಡ್ತೀವಿ ಸಾಲ ಮನ್ನಾ ಮಾಡಿ ಎಂದು ಕೇಳ್ತಾರೆ. ರೈತರು ಸಾಲಗಾರರು ಆಗಬಾರದು ಎಂದು ಮುಂಗಾರಿನ ವೇಳೆ ಎಕ್ಕರೆ 10 ಸಾವಿರ ಕೊಡುವ ಯೋಜನೆ ಹಾಕಿಕೊಂಡಿದ್ದೇನೆ. ಸ್ಪಷ್ಟ ಬಹುಮತ ನೀಡಿದ್ರೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

Share This Article