2 ಬಾರಿ ಆಪರೇಷನ್ ಆದ್ರೂ ಆರೋಗ್ಯ ಲೆಕ್ಕಿಸದೇ ಪಕ್ಷಕ್ಕಾಗಿ ಹೋರಾಟ: ರೇವಣ್ಣ ಭಾವುಕ

Public TV
1 Min Read

ಹಾಸನ: ಎರಡು ಬಾರಿ ಆಪರೇಷನ್ ಆಗಿದ್ದರೂ ಕುಮಾರಣ್ಣ (HD Kumaraswamy) ಆರೋಗ್ಯ ಲೆಕ್ಕಿಸದೇ ಪಕ್ಷಕ್ಕಾಗಿ ಹೋರಾಟ ಮಾಡ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಭಾವುಕರಾಗಿದ್ದಾರೆ.

ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎರಡು ಬಾರಿ ಆಪರೇಷನ್ ಆಗಿದ್ದರೂ ಆರೋಗ್ಯ ಲೆಕ್ಕಿಸದೇ ಕುಮಾರಣ್ಣ ಹೋರಾಟ ಮಾಡ್ತಿದ್ದಾರೆ. ಅವರಿಗೆ ಯಾವುದೇ ರೀತಿಯಲ್ಲೂ ನೋವಾಗದಂತೆ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ಹಾಸನ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಗೊಂದಲ ಬಗೆಹರಿಸುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಆಶಿಕಾ ರಂಗನಾಥ್‌ಗೆ ಮನಸಾರೆ ಹಾರೈಸಿದ ಜ್ಯೂ.ಎನ್‌ಟಿಆರ್‌

ದೇವೇಗೌಡರಿಗೆ ದೇವರು ಇನ್ನಷ್ಟು ಆರೋಗ್ಯ ಕೊಡಬೇಕು. ಏಕೆಂದರೆ ಕುಮಾರಣ್ಣ ನಮ್ಮ ನಾಯಕರು, ಈ ಬಾರಿ ಚುನಾವಣೆಯಲ್ಲಿ (Karnataka Election 2023) 123 ಸೀಟು ಗೆದ್ದು, ಮುಖ್ಯಮಂತ್ರಿಯಾಗಿ ವಿಧಾನಸೌಧದಲ್ಲಿ ಜೆಡಿಎಸ್ (JDS) ಬಾವುಟ ಹಾರಿಸುವುದನ್ನ ಅವರು ನೋಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊರಗಿನ ಪರಿಸ್ಥಿತಿ ಏನೇ ಇರಲಿ, ಆಂತರಿಕವಾಗಿ ಭಾರತ ಗಟ್ಟಿಯಾಗಿದೆ: ಮೋದಿ

ಕುಮಾರಣ್ಣ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕ, ಅವರು ಮುಖ್ಯಮಂತ್ರಿ ಆಗಿದ್ದಾಗ 28 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಾರೆ. ಈಗ ಪಂಚರತ್ನ ಯಾತ್ರೆ ಮಾಡ್ತಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಸಹ ಹಿರಿಯ ಮುಖಂಡರಿಗೆ ಶಕ್ತಿ ತುಂಬುವ ಕೆಲಸ ಮಾಡ್ತಿದ್ದೇವೆ. ಅರಸೀಕೆರೆಯಲ್ಲಿ ಫೆ.12 ರಂದು ಸಭೆ ಇದೆ. ಕುಮಾರಣ್ಣ ಸೇರಿದಂತೆ ಎಲ್ಲರೂ ಅಲ್ಲಿಗೆ ಬರ್ತಾರೆ. ಹಾಸನ (Hassan) ಜಿಲ್ಲೆಯಲ್ಲೂ ಸಭೆ ಮಾಡುವ ಮೂಲಕ ಸಮಸ್ಯೆಗಳನ್ನ ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *