ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತೆ: ಹೆಚ್‌ಡಿಕೆ ಬಾಂಬ್‌

Public TV
1 Min Read

ಬೆಂಗಳೂರು: ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬಾಂಬ್‌ ಸಿಡಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇವೇಗೌಡರ (HD Devegowda) ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೆ ಕುಮಾರಸ್ವಾಮಿ ಶಾಪ ಹಾಕಿದ್ದಾರೆ.

ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: 1982-2024: ಇಸ್ರೇಲ್‌ vs ಹಿಜ್ಬುಲ್ಲಾ ನಡುವೆ ನಿಲ್ಲದ ಸಂಘರ್ಷ – 42 ವರ್ಷಗಳ ರಕ್ತಸಿಕ್ತ ಚರಿತ್ರೆ ಬಗ್ಗೆ ನಿಮಗೆಷ್ಟು ಗೊತ್ತು?

ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪ ಮಾಡಿದ ಹೆಚ್‌ಡಿಕೆ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ.  ಅವರ ವಿರುದ್ಧ  ತನಿಖೆ ಮಾಡಬೇಕು ಎಂದು ಸವಾಲು ಹಾಕಿದ ಅವರು ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

 

Share This Article