ನಮಗೆ ಯಾರ ಬಗ್ಗೆ ಕೂಡ ಸಾಫ್ಟ್ ಕಾರ್ನರ್ ಇಲ್ಲ: ಹೆಚ್.ಡಿ ಕುಮಾರಸ್ವಾಮಿ

Public TV
2 Min Read

ಹುಬ್ಬಳ್ಳಿ: ನಮಗೆ ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ್ ಕಾರ್ನರ್ ಇಲ್ಲ, ನಮಗೆ ಬಿಜೆಪಿ ಮೇಲೆ ಸಾಫ್ಟ್ ಕಾರ್ನರ್ ಇದ್ದಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಯಾಕೆ ಮಾಡುತ್ತಿದ್ದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿ ಚೆನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಅದನ್ನು ಬಿಟ್ಟು ಬೇರೆ ಏನು ಹೇಳಲಿಕ್ಕೆ ಸಾಧ್ಯ? ಬಿಜೆಪಿ ಜೊತೆ 5 ವರ್ಷ ಸರ್ಕಾರ ಮಾಡಿದ್ದೆ, 2006ರಲ್ಲಿ ಸರ್ಕಾರ ಮಾಡಲು ಇದೇ ಸಿದ್ದರಾಮಯ್ಯ ಕಾರಣ. ನಮ್ಮ ಪಕ್ಷದ ಬಗ್ಗೆ ಬೇರೆ ವಿಷಯ ಇಲ್ಲದೇ ಮಾತು ಎತ್ತಿದರೆ ಒಳ ಒಪ್ಪಂದ ಅಂತ ಮಾತನಾಡುತ್ತಾರೆ ಎಂದು ಖಾರವಾಗಿ ನುಡಿದರು. ಇದನ್ನೂ ಓದಿ:  ಪ್ರಜ್ವಲ್ ರೇವಣ್ಣಗಿನ್ನೂ ಮದ್ವೆನೇ ಆಗಿಲ್ಲ, ತಾತನಿಂದ ಒಳ್ಳೇದನ್ನ ತಿಳ್ಕೋಬೇಕು: ಸೋಮಣ್ಣ ವ್ಯಂಗ್ಯ

HDK

ಇನ್ನೂ ಸಿಂದಗಿಯಲ್ಲಿ ಕಳೆದ 5 ದಿನಗಳಿಂದ ಪ್ರಚಾರ ನಡೆಸಿದ್ದು, ಈ ಬಾರಿ ಚುನಾವಣೆ ಗೆಲ್ಲುತ್ತೇವೆ. ಜನರ ಪ್ರತಿಕ್ರಿಯೆ ಉತ್ತಮವಾಗಿದೆ. ದೇವೆಗೌಡರ ಕಾಲದ ಹಾಗೂ ನನ್ನ ಕಾಲದ ನೀರಾವರಿ ಯೋಜನೆಗಳು ರೈತರ ಸಾಲ ಮನ್ನಾ ಬಗ್ಗೆ ಹಳ್ಳಿಗಳಲ್ಲಿ ಜನ ಸ್ಪಂದಿಸಿ ಮಾತನಾಡುತ್ತಿದ್ದಾರೆ ಎಂದರು. ಇದೇ ವೇಳೆ ಜನತಾ ಪರಿವಾರದ ಸಿಎಂ ಉದಾಸಿ ಬಿಜೆಪಿಗೆ ಹೋದ ನಂತರ ನಮಗೆ ಹಾನಗಲ್‍ನಲ್ಲಿ ನಾಯಕತ್ವದ ಕೊರತೆ ಇತ್ತು. ಈ ಬಾರಿ ನಾವು ಹಾನಗಲ್‍ನಲ್ಲಿ ಮೊದಲೇ ಅಭ್ಯರ್ಥಿ ಘೋಷಣೆ ಮಾಡಿದ್ದೇವೆ, ಅಲ್ಲಿಯ ಸ್ಥಿತಿ ನೋಡಿ ನಾನು ಮಾತನಾಡುತ್ತೇನೆ ಎಂದರು.  ಇದನ್ನೂ ಓದಿ: ಸಿದ್ದರಾಮಯ್ಯ ತೀರ್ಮಾನ, ಹೇಳಿಕೆಗಳು ಅವರಿಗೆ ಶೋಭೆಯಲ್ಲ: ವಿ. ಸೋಮಣ್ಣ

ಸಿದ್ದರಾಮಯ್ಯ ಅವರಿಗೆ ಜೆಡಿಎಸ್‍ನಲ್ಲಿ ಸಮಸ್ಯೆ ಇಲ್ಲಾ ಅಂತ ಅವರ ಭಾವನೆ ಇರಬಹುದು, ನಾನು ಅವರಿಗೆ ಮನವಿ ಮಾಡುತ್ತೇನೆ, ಸಿದ್ದರಾಮಯ್ಯ ನಿಮ್ಮ ವರ್ಚಸ್ಸು ಹಾಗೂ ರಾಜಕೀಯ ಶಕ್ತಿ ಕುಂದಿಸಿಕೊಳ್ಳುವ ಕೆಲಸ ಮಾಡಬೇಡ, ನಾನು ಯಾರ ಮೇಲೂ ವೈಯಕ್ತಿಕ ನಿಂದನೆ ಮಾಡಿಲ್ಲ, ಆದರೆ ನಾನು ಎಲ್ಲ ನಾಯಕರಿಗೂ ಹೇಳುತ್ತೇನೆ, ಚುನಾವಣೆಯಲ್ಲಿ ಆಗಿರಬಹುದು ಅಥವಾ ಜನಪ್ರತಿನಿಯಾಗಿರಬಹುದು ಸರ್ಕಾರ ನಡೆಸಬೇಕಾದರೆ ಅದರ ಆಧಾರದ ಮೇಲೆ ಚರ್ಚೆ ಮಾಡಿ. ವೈಯಕ್ತಿಕವಾದ ವಿಚಾರ ಚರ್ಚೆ ಮಾಡಲು ಹೋದರೆ ಪರಸ್ಪರ ಕೆಸರೆರಚಾಟ ಮಾಡಿಕೊಂಡು ಹೋದರೆ ಅದಕ್ಕೆ ಅಂತಿಮ ಇರಲ್ಲ ಎಂದು ನುಡಿದರು.

Share This Article
Leave a Comment

Leave a Reply

Your email address will not be published. Required fields are marked *