ಪಾಪದ ದುಡ್ಡಲ್ಲಿ ಬಟ್ಟೆ ತೆಗೆಸಿಕೊಳ್ಳುವಷ್ಟು ದಾರಿದ್ರ್ಯ ನನಗೆ ಬಂದಿಲ್ಲ – ಡಿಕೆಶಿಗೆ ಹೆಚ್‌ಡಿಕೆ ತಿರುಗೇಟು

Public TV
1 Min Read

ಬೆಂಗಳೂರು: ಪಾಪದ ದುಡ್ಡಲ್ಲಿ ಬಟ್ಟೆ ತೆಗೆಸಿಕೊಳ್ಳವಷ್ಟು ದಾರಿದ್ರ್ಯ ನನಗಿನ್ನೂ ಬಂದಿಲ್ಲ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy), ಡಿಸಿಎಂ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

2028ಕ್ಕೆ ಜೆಡಿಎಸ್-ಬಿಜೆಪಿ (JDS – BJP) ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ ಅಂತಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ರು. ಇದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: RSS ಮುಖಂಡನ ಮನೆ ಮೇಲೆ ಮಧ್ಯರಾತ್ರಿ ದಾಳಿ – ಕಾರಣ ಕೇಳಿ ದ.ಕ. ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

ಹೌದು. ಇಂದು ಬೆಳಗ್ಗೆ ತಮ್ಮ ಜೆಪಿನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ನನಗೆ ಅವ್ರಿಂದ ಬಟ್ಟೆ ತೆಗೆದುಕೊಳ್ಳೋ‌ ದರಿದ್ರ ಬಂದಿಲ್ಲ. ಅದು ಜನರ ದುಡ್ಡನ್ನ ಲೂಟಿ ಮಾಡಿ ಪಾಪದಿಂದ ಸಂಪಾದನೆ ಮಾಡ್ತಿರೋ ಪಾಪದ ಹಣ. ಪಾಪದ ಹಣದಿಂದ ಬಟ್ಟೆ ತೆಗೆದುಕೊಳ್ಳೋ ದರಿದ್ರ ಪರಿಸ್ಥಿತಿ ನನಗೆ ಬಂದಿಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ರಾಜಕೀಯ ಮಾತಾಡ್ಬಾರದು ಅಂತ ಯಾವಾಗಿನಿಂದ ಜಾರಿಯಾಗಿದೆ? – ನೋಟಿಸ್‌ಗೆ ಚಕ್ರವರ್ತಿ ಸೂಲಿಬೆಲೆ ಕಿಡಿ

ನನಗೆ ಬಟ್ಟೆ ಬೇಕು ಅಂದ್ರೆ ನನ್ನ ಜನರೇ ಕೊಡಿಸ್ತಾರೆ ಅಂತಾ ಡಿಕೆ ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸರ್ಕಾರದ ಬುಡಕ್ಕೆ ಮತ್ತೊಂದು ಭ್ರಷ್ಟಾಚಾರ ಬಾಂಬ್‌; ಜಮೀರ್ ಪಿಎ – ಬಿ.ಆರ್ ಪಾಟೀಲ್‌ರದ್ದು ಎನ್ನಲಾದ ಆಡಿಯೋ ವೈರಲ್‌

Share This Article