ಸೇಲಂ ಉಕ್ಕು ಸ್ಥಾವರದಲ್ಲಿ ಹೆಚ್‌ಡಿಕೆ ಯೋಗಾಭ್ಯಾಸ

Public TV
2 Min Read

ಚೆನ್ನೈ: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿಯವರು (H D Kumaraswamy) ಸೇಲಂ ಉಕ್ಕು ಸ್ಥಾವರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ (Yoga Day) ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಕಾರ್ಖಾನೆಯ ಸಿಬ್ಬಂದಿ, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು, ಭಾರತೀಯ ಉಕ್ಕು ಪ್ರಾಧಿಕಾರ ಹಾಗೂ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜೊತೆಯಲ್ಲಿ ಅವರು ಯೋಗಾಭ್ಯಾಸ ಮಾಡಿದ್ದಾರೆ. ಸೇಲಂ (Salem) ಟೌನ್‌ಶಿಪ್‌ನಲ್ಲಿರುವ ಹಿಲ್ ವ್ಯೂ ಕ್ರೀಡಾಂಗಣದಲ್ಲಿ ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ಸಚಿವರು, ಕೆಲ ಪ್ರಮುಖ ಸರಳ ಆಸನಗಳನ್ನು ಹಾಗೂ ಪ್ರಾಣಾಯಾಮವನ್ನು ಅಭ್ಯಾಸ ಮಾಡಿದ್ದಾರೆ. ಇದನ್ನೂ ಓದಿ: ನಾನು ಬಾಬಾ ರಾಮ್‍ದೇವ್ ಶಿಬಿರದಲ್ಲಿ ತರಬೇತಿ ಪಡೆದ ಯೋಗ ಪಟು: ಲಕ್ಷ್ಮಿ ಹೆಬ್ಬಾಳ್ಕರ್

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯೋಗ ಎನ್ನುವುದು ನಮ್ಮ ಭಾರತದಲ್ಲಿ ಪ್ರಾಚೀನ ಕಾಲದಿಂದ ಬೆಳೆದು ಬಂದ ಜೀವನಶೈಲಿಯಾಗಿದೆ. ಭಾರತಕ್ಕಷ್ಟೇ ಸೀಮಿತವಾಗಿದ್ದ ಯೋಗವನ್ನು ಹನ್ನೊಂದು ವರ್ಷಗಳ ಹಿಂದೆ ಪ್ರಧಾನಿಗಳಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿಯವರು ಇಡೀ ಜಗತ್ತಿನ ವೇದಿಕೆಗೆ ತೆಗೆದುಕೊಂಡು ಹೋದರು. ಅದರ ಪರಿಣಾಮವಾಗಿ ಜಗತ್ತಿನ ಎಲ್ಲೆಡೆ ಜೂನ್ 21ನೇ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಆಚರಿಸಲಾಗುತ್ತಿದೆ. ಇದರ ಸಂಪೂರ್ಣ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲಬೇಕು ಎಂದಿದ್ದಾರೆ. ಇದನ್ನೂ ಓದಿ: ಗುದ್ದಿದ ರಭಸಕ್ಕೆ ತುಂಡಾಗಿ ವಿದ್ಯುತ್‌ ಕಂಬವನ್ನೇ 50 ಅಡಿ ದೂರಕ್ಕೆ ದೂಡಿದ ಕಾರು!

ಸೇಲಂ ಉಕ್ಕು ಸ್ಥಾವರದ ಸಿಬ್ಬಂದಿ, ಅಧಿಕಾರಿಗಳು, ಅವರ ಕುಟುಂಬ ಸದಸ್ಯರ ಜೊತೆ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ನನಗೆ ಸಿಕ್ಕಿದೆ. ಇದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ರಾಷ್ಟ್ರದ ಬೆನ್ನೆಲುಬಾಗಿರುವ ಉಕ್ಕು ಕ್ಷೇತ್ರದ ಕುಟುಂಬದೊಂದಿಗೆ ಯೋಗದ ಅನನ್ಯತೆ, ಅವಿಸ್ಮರಣೆಯ ಕ್ಷಣಗಳನ್ನು ಅನುಭವಿಸುವ ಭಾಗ್ಯ ನನ್ನದಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರದಿಂದ ಯೂಟರ್ನ್‌ – ಅಮೆರಿಕ ಭೇಟಿಗೆ ಅವಕಾಶ ಸಿಕ್ಕಿದ ಬೆನ್ನಲ್ಲೇ MEA ವಿರುದ್ಧ ಪ್ರಿಯಾಂಕ್‌ ಖರ್ಗೆ ಕೆಂಡಾಮಂಡಲ

ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮಾನಸಿಕ ಶಾಂತಿ, ಮಾನಸಿಕ ಸ್ಪಷ್ಟತೆ, ದೈಹಿಕ ಸ್ವಾಸ್ತ್ಯತೆ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ಪರಿಣಾಮಕಾರಿ ಮಾರ್ಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಯೋಗವು ಜಗತ್ತನ್ನೇ ಒಗ್ಗೂಡಿಸಿದೆ. ಜಗತ್ತಿನ ಯೋಗಕ್ಷೇಮಕ್ಕೆ ನಮ್ಮ ಪಾರಂಪರಿಕ ಯೋಗವು ಮಹೋನ್ನತ ಕೊಡುಗೆ ನೀಡುತ್ತಿದೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಹೆಣ್ಣು ಹೂವಿನಂತೆ – ಇರಾನ್‌ ಸುಪ್ರೀಂ ನಾಯಕನ ಹಳೆಯ ಪೋಸ್ಟ್‌ ವೈರಲ್‌

ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧ್ಯಕ್ಷ ಅಮರೇಂದು ಪ್ರಕಾಶ್, ಉಕ್ಕು ಸಚಿವಾಲಯದ ಜಂಟಿ ಕಾರ್ಯದರ್ಶಿ ಅಭಿಜಿತ್ ನರೇಂದ್ರ ಸೇರಿ ಸೇಲಂ ಉಕ್ಕು ಸ್ಥಾವರದ ಹಿರಿಯ ಅಧಿಕಾರಗಳು ಯೋಗಾಭ್ಯಾಸದಲ್ಲಿ ಭಾಗಿಯಾಗಿದ್ದರು.

Share This Article