ರೇವಣ್ಣ ಕುಟುಂಬದವ್ರು ನನ್ನ ಪರ ಪ್ರಚಾರಕ್ಕೆ ಬರುತ್ತಾರೆ: ಹಾಸನ ಜೆಡಿಎಸ್ ಅಭ್ಯರ್ಥಿ

Public TV
1 Min Read

ಹಾಸನ: ಟಿಕೆಟ್ ನೀಡಿದ್ದಕ್ಕಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ( H. D. Deve Gowda) ಧನ್ಯವಾದ ಅರ್ಪಿಸುತ್ತೇನೆ ಎಂದು ಜೆಡಿಎಸ್ (JDS) ಅಭ್ಯರ್ಥಿ ಹೆಚ್.ಪಿ ಸ್ವರೂಪ್ (H.P Swaroop) ಹೇಳಿದ್ದಾರೆ.

ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಾನಿ ರೇವಣ್ಣ ಅವರು ಹಾಸನ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಹೈಕಮಾಂಡ್ ನನಗೆ ಟಿಕೆಟ್ ನೀಡಿರುವುದು ಸಂತಸ ತಂದಿದೆ. ರೇವಣ್ಣ (H. D. Revanna) ಕುಟುಂಬ ನನ್ನ ಪರ ಪ್ರಚಾರಕ್ಕೆ ಬರುತ್ತಾರೆ. ಶೀಘ್ರದಲ್ಲೇ ರೇವಣ್ಣ ಅವರನ್ನು ಭೇಟಿಯಾಗುತ್ತೇನೆ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

ಈ ಚುನಾವಣೆ ಶಾಸಕ ಪ್ರೀತಂಗೌಡ ಹಾಗೂ ಸ್ವಾಭಿಮಾನದ ನಡುವೆ ನಡೆಯುವ ಚುನಾವಣೆಯಾಗಿದೆ. ಇಲ್ಲಿ ನಮ್ಮ ತಂದೆಯ ಕೆಲಸಗಳು ನನ್ನ ಕೈಹಿಡಿಯಲಿವೆ. ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದಿದ್ದಾರೆ.

ಪಕ್ಷದ ಟಿಕೆಟ್ ಸಿಗಲು ಕಾರಣರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ – ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

Share This Article