ಪ್ರಜ್ವಲ್ ರೇವಣ್ಣ ಚುನಾವಣೆ ಸ್ಫರ್ಧೆ ಕುರಿತು ಎಚ್‍ಡಿಡಿ ಖಡಕ್ಕಾಗಿ ಪ್ರತಿಕ್ರಿಯಿಸಿದ್ದು ಹೀಗೆ

Public TV
1 Min Read

ಚಿಕ್ಕಮಗಳೂರು: ಡಾಕ್ಟರ್ ಮಗ ಡಾಕ್ಟರ್ ಆದ್ರೆ ಸಂಕಟವಿಲ್ಲ. ಜಡ್ಜ್ ಮಗ ಜಡ್ಜ್ ಆದ್ರೆ ಚರ್ಚೆ ಇಲ್ಲ. ರಾಜಕಾರಣಿ ಮಗ ರಾಜಕಾರಣಿಯಾದ್ರೆ ಯಾಕೆ ಯೋಚಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ವಿಚಾರ ಕುರಿತಂತೆ ಸೊಸೆಯನ್ನ ಮೇಲೆ ತರಬೇಕೆಂದು ಒಳಗೊಳಗೆ ಏನೋ ಇದೆ ಅನ್ನೋದೆಲ್ಲಾ ಸುಳ್ಳು. ನಾನು ಅಲ್ಲಿ ಐದು ಗಂಟೆ ಕೂತು ಕನ್ವಿನ್ಸ್ ಮಾಡಿದ್ದೇನೆ ಅಂದ್ರು.

ಯಾರೊಬ್ರು ಟಿಕೆಟ್ ಆಕಾಂಕ್ಷಿಗಳಿಲ್ಲ. ಯಾರು ಟಿಕೆಟ್ ಕೇಳಬಾರದೆಂದು ಎಲ್ಲರೂ ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದಾರೆ. ಮೂರು ಬಾರಿ ಪಂಚಾಯತಿ ಕೂಡ ನಡೆಸಿದ್ದೇವೆ. ಈಗಲೂ ಬಹಿರಂಗವಾಗಿ ಹೇಳುತ್ತಿದ್ದೇನೆ. ಟಿಕೆಟ್ ಆಕಾಂಕ್ಷಿಗಳಿದ್ರೆ ಯಾರಾದ್ರು ಮುಂದೆ ಬನ್ನಿ ಅಂತ. ಆದ್ರೆ ಯಾರೊಬ್ರು ಬಂದಿಲ್ಲ ಅಂದ್ರು.

Share This Article
Leave a Comment

Leave a Reply

Your email address will not be published. Required fields are marked *