ಅನ್ನಭಾಗ್ಯ ಗುದ್ದಾಟದ ಮಧ್ಯೆಯೇ ಒಂದಾಗಿ ಶೋ ರೂಮ್ ಉದ್ಘಾಟಿಸಿದ ಎಚ್‍ಡಿಕೆ-ಜಮೀರ್

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಆಹಾರ ಹಾಗೂ ನಾಗರೀಕ ಸಚಿವ ಜಮೀರ್ ಅಹ್ಮದ್ ಕಳೆದ ಕೆಲವು ದಿನಗಳಿಂದ ಒಬ್ಬರಿಗೊಬ್ಬರು ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ ಇಂದು ಇಬ್ಬರು ಒಂದಾಗಿಯೇ ಶೋ ರೂಮ್ ಒಂದನ್ನು ಉದ್ಘಾಟನೆ ಮಾಡಿದ್ದಾರೆ.

ನಗರದ ಚಾಮರಾಜಪೇಟೆಯಲ್ಲಿ ನಿಸಾರ್ ಮೆಟಲ್ಸ್‍ನ ಹೊಸ ಶೋ ರೂಮ್ ಅನ್ನು ಕುಮಾರಸ್ವಾಮಿ ಹಾಗೂ ಜಮೀರ್ ಅಹ್ಮದ್ ಒಟ್ಟಾಗಿ ರಿಬ್ಬನ್ ಕಟ್ ಮಾಡಿ, ಉದ್ಘಾಟಿಸಿದ್ದಾರೆ.

ಅಕ್ಕಿ ಕಡಿತದ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ನನ್ನ ಬಳಿ ಚರ್ಚೆ ಮಾಡಬೇಕಿತ್ತು. ಆದರೆ ಹಾಗೇ ಮಾಡಲಿಲ್ಲ. ಹೀಗಾಗಿ ಹಿಂದಿನಂತೆ 7 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಮಂಗಳವಾರ ಹೇಳಿಕೆ ನೀಡಿದ್ದರು. ಇದಕ್ಕೆ ಖಾರವಾಗಿಯೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಕುಮಾರಸ್ವಾಮಿ, ಜಮೀರ್ ಅಹ್ಮದ್ ಹೇಳಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಿರುಗೇಟು ಕೊಟ್ಟಿದ್ದರು.

Share This Article
Leave a Comment

Leave a Reply

Your email address will not be published. Required fields are marked *