ಗಣೇಶ ಮೂರ್ತಿಗೆ ಪೂಜೆ ಮಾಡಿದ್ದಕ್ಕೆ ವಿದ್ಯಾರ್ಥಿನಿ ಕೈ ಮುರಿದ ಹೆಡ್‍ಮಾಸ್ಟರ್!

Public TV
1 Min Read

– ಅಮಾನತು, ಚಿಕಿತ್ಸೆ ವೆಚ್ಚ ಭರಿಸುವಂತೆಯೂ ಸೂಚನೆ

ಕೋಲಾರ: ಕೆಜಿಎಫ್‍ನ (KGF) ಶಾಲೆಯಲ್ಲಿ ಗಣೇಶ ಮೂರ್ತಿಗೆ ಪೂಜೆ ಮಾಡಿದ್ದಕ್ಕೆ ವಿದ್ಯಾರ್ಥಿನಿಯ ಕೈಯನ್ನು ಹೆಡ್‍ಮಾಸ್ಟರ್ ಮುರಿದ ಪ್ರಸಂಗವೊಂದು ಕೋಲಾರದಲ್ಲಿ ನಡೆದಿದೆ.

ಸದ್ಯ ಪ್ರಕರಣ ಸಂಬಂಧ ಕೋಲಾರ ಡಿಡಿಪಿಐ ಕೃಷ್ಣಮೂರ್ತಿಯವರು ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಬಾಲಕಿಯ ಚಿಕಿತ್ಸೆಗೆ ತಗುಲುವ ಖರ್ಚು ವೆಚ್ಚವನ್ನು ಕೂಡ ಮುಖ್ಯ ಶಿಕ್ಷಕಿಯೇ ಭರಿಸಬೇಕೆಂದು ಸೂಚನೆ ನೀಡಲಾಗಿದೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಅಲ್ಲಿಕಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ವಾರ ಈ ಘಟನೆ ನಡೆದಿತ್ತು. ಮುಖ್ಯ ಶಿಕ್ಷಕಿಯು ವಿದ್ಯಾರ್ಥಿನಿ ಭವ್ಯಶ್ರೀ ಥಳಿಸಿ ಎಡ ಕೈ ಮುರಿದಿದ್ದರು. ಈ ಸಂಬಂಧ ಪೋಷಕರು ಶಾಲಾ ಮುಖ್ಯ ಶಿಕ್ಷಕಿ ವಿರುದ್ಧ ದೂರು ಸಲ್ಲಿಸಿದ್ದರು. ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಪೋಷಕರು ದೂರು ನೀಡಿದ್ದರು. ಹೀಗಾಗಿ ಶಿಕ್ಷಣಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗ ಕ್ಷೇಮ ವಿಚಾರಿಸಿದ್ದರು. ಇದನ್ನೂ ಓದಿ: ಕುದಿಯೋ ನೀರಿಗೆ ಖಾರದ ಪುಡಿ ಬೆರೆಸಿ ಪತಿ ಮೇಲೆ ಎರಚಿ ಬೆದರಿಕೆ ಹಾಕಿದ್ಳು!

ಮುಖ್ಯ ಶಿಕ್ಷಕಿ ಹೇಮಲತಾರನ್ನ ವರ್ಗಾವಣೆ ಮಾಡುವಂತೆ ಪೋಷಕರ ಪಟ್ಟು ಹಿಡಿದಿದ್ದರು. ಈ ವೇಳೆ ಶಿಕ್ಷಣಾಧಿಕಾರಿ ಮುನಿವೆಂಕಟ ರಾಮಾಚಾರಿ ಅವರು ಶಾಲಾ ಮಕ್ಕಳ ಪೋಷಕರಿಗೆ ಭರವಸೆ ನೀಡಿದ್ದರು. ಅಂತೆಯೇ ಇದೀಗ ಮುಖ್ಯ ಶಿಕ್ಷಕಿಯ ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್