ಮನೆಗೋಡೆ ಕುಸಿತ ಪಕ್ಕದ ಮನೆಯವರ ರಕ್ಷಣೆ

Public TV
1 Min Read

ಹುಬ್ಬಳ್ಳಿ: ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಗಣೇಶಪೇಟೆಯ ಬಿಂದರಗಿ ಓಣಿಯಲ್ಲಿ ಮನೆಗೋಡೆ ಕುಸಿದು ಬಿದ್ದಿದ್ದು, ಮನೆಗೊಳಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ.

ಗೋಡೆ ಕುಸಿಯುತ್ತಿರುವುದನ್ನು ಕಂಡ ಮನೆಯ ಮಾಲೀಕ ಬಸವಂತ ಶಿಂಧೆ, ಪತ್ನಿ ಮೂರು ಮಕ್ಕಳು ಹೊರಗೆ ಓಡಿ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಕ್ಕದ ಮನೆಯ ಮೇಲೆ ಈ ಮಣ್ಣಿನ ಗೋಡೆ ಬಿದ್ದಿದ್ದು ಅವರ ಮನೆಯಲ್ಲಿ ನಾಲ್ಕು ಜನ ಸಿಲುಕಿಕೊಂಡಿದ್ದರು. ಸರಿಯಾದ ಸಮಯಕ್ಕೆ ಆಗಮಿಸಿ ಅಗ್ನಿಶಾಮಕದಳ ಸಿಬ್ಬಂದಿ ನಾಲ್ಕು ಜನರನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಕೆಜಿಎಫ್ 2, ಲಾಲ್ ಸಿಂಗ್ ಚಡ್ಡಾ ಒಂದೇ ದಿನ ರಿಲೀಸ್

ಒಂದೇ ಕುಟುಂಬದ ಆರಿಫ್ ಖಾನ್, ಶೈನಾಜಬಾನು, ಸಾಧಿಕ್ ಹಾಗೂ ನಾಜಿಯಾ ಇವರನ್ನು ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಚಂದ್ರಶೇಖರ ಭಂಡಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರ ಜೀವ ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಕೊಹ್ಲಿ ಅಲ್ಲ ಗುಪ್ಟಿಲ್ ಈಗ ಟಿ20 ಕ್ರಿಕೆಟ್‍ನ ಕಿಂಗ್

Share This Article
Leave a Comment

Leave a Reply

Your email address will not be published. Required fields are marked *