ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿ ಹೋದ ರೈತ – ಮುಳ್ಳು ಕಂಟಿಯಲ್ಲಿ ಶವ ಪತ್ತೆ

Public TV
0 Min Read

ಬಾಗಲಕೋಟೆ: ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ (Heavy Rain) ನೀರಿನಲ್ಲಿ ಕೊಚ್ಚಿ ಹೋಗಿ ರೈತರೊಬ್ಬರು (Farmer) ಸಾವನ್ನಪ್ಪಿದ ಘಟನೆ ಹುನಗುಂದ ತಾಲ್ಲೂಕಿನ ಮೂಗನೂರಿನಲ್ಲಿ ನಡೆದಿದೆ.

ಮಲ್ಲಪ್ಪ ಶಿವಪ್ಪ ಬಸವನಾಳ(38) ಮೃತ ರೈತ. ಮೂಗನೂರು ಗ್ರಾಮದಿಂದ ಸ್ವಗ್ರಾಮ ಅಂಬಲಿಕೊಪ್ಪಕ್ಕೆ ಬೈಕಿನಲ್ಲಿ ತೆರಳುತ್ತಿದ್ದರು.

ಬೈಕ್‌ನಲ್ಲಿ ಸೇತುವೆ ದಾಟುವಾಗ ನೀರಲ್ಲಿ ಕೊಚ್ಚಿ ಹೋಗಿದ್ದರು. ಬೈಕ್‌ ಸೇತುವೆ ಮೇಲೆ ಬಿದ್ದಿದ್ದರೆ ಹಳ್ಳದ ಪಕ್ಕದ ಮುಳ್ಳು ಕಂಟಿಯಲ್ಲಿ ರೈತನ ಶವ ಪತ್ತೆಯಾಗಿದೆ. ಅಮೀನಗಢ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ.

Share This Article