ಬೆಳಗಾವಿಯಲ್ಲಿ ವರುಣನ ಆರ್ಭಟ- ಕೊಚ್ಚಿಹೋಯ್ತು ಸೇತುವೆ

Public TV
0 Min Read

ಬೆಳಗಾವಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದ ಮಲಪ್ರಭಾ ನದಿಗೆ ನಿರ್ಮಿಸಿದ್ದ ಸೇತುವೆ ಕೊಚ್ಚಿ ಹೋಗಿದೆ.

ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ-ಬೇವಿನಕೊಪ್ಪ ಗ್ರಾಮಗಳ ನಡುವೆ ಮಲಪ್ರಭಾ ನದಿಗೆ ಸೇತುವೆ ನಿರ್ಮಿಸಲಾಗಿತ್ತು. ಸುಮಾರು 5 ಕೋಟಿ ರೂ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು.

ಭಾರೀ ಮಳೆ ಸುರಿದ ಪರಿಣಾಮವಾಗಿ ಅರ್ಧ ಸೇತುವೆಯೇ ಕೊಚ್ಚಿಕೊಂಡು ಹೋಗಿದೆ. ಸಾಕಷ್ಟು ನೀರಿನ ಒತ್ತಡವಿರುವ ಪ್ರದೇಶ ಇದಾಗಿದ್ದು ಸೇತುವೆ ನೆಲಕಚ್ಚಿದೆ. ಬ್ರಿಡ್ಜ್ ನಿರ್ಮಾಣವಾಗಿ ಈ ಕಾಮಗಾರಿ ಪೂರ್ಣಗೊಂಡು ಇನ್ನೂ 6 ತಿಂಗಳೂ ಕಳೆದಿಲ್ಲ. ಸೇತುವೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *