ಬೆಂಗ್ಳೂರಿನಲ್ಲಿ ಮಳೆ ಆರ್ಭಟ – ಇಂದಿನ RCB ಮ್ಯಾಚ್ ರದ್ದಾಗುತ್ತಾ?

Public TV
2 Min Read

ಬೆಂಗಳೂರು: ಭಾನುವಾರ ಮಧ್ಯಾಹ್ನ ಬೆಂಗಳೂರು ನಗರದಲ್ಲಿ ಮಳೆಯ ಆರ್ಭಟ (Rain In Bengaluru) ಜೋರಾಗಿದ್ದು, ರಸ್ತೆಗಳು ಕೆರೆಯಂತಾಗಿವೆ. ಮಠ ಮಠ ಮಧ್ಯಾಹ್ನ 3:30ರ ವೇಳೆಗೆ ಕತ್ತಲು ಆವರಿಸಿದ್ದು, ವಾಹನ ಸವಾರರು ಪರದಾಡಿದ್ದಾರೆ.

ಮಳೆಯ ಆರ್ಭಟ ಜೋರಾದ ಹಿನ್ನೆಲೆ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ (GT) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹೈವೋಲ್ಟೇಜ್ ಪಂದ್ಯ ರದ್ದಾಗುವ ಸಾಧ್ಯತೆ ಏರ್ಪಟ್ಟಿದೆ. ಇದನ್ನೂ ಓದಿ: ಕೊನೆಯಲ್ಲಿ ರಿಂಕು 6,4,6 – ಹೋರಾಡಿ ಸೋತ KKR – 1 ರನ್‌ನಿಂದ ಗೆದ್ದು ಪ್ಲೇ ಆಫ್‌ಗೆ ಹಾರಿದ ಲಕ್ನೋ

ಭಾರೀ ಮಳೆ ಹಿನ್ನೆಲೆಯಲ್ಲಿ ಮೈದಾನದ ತುಂಬಾ ನೀರು ಆವರಿಸಿದೆ. ಜೊತೆಗೆ ಪ್ರೇಕ್ಷಕರು ಕುಳಿತುಕೊಳ್ಳುವ ಆಸನಗಳ ಸ್ಥಳ ಹಾಗೂ ವಿಐಪಿ ಕ್ಯಾಬಿನ್‌ಗಳಿಗೂ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ಲೀಗ್ ಹಂತದ ಕೊನೆಯ ಪಂದ್ಯ ರದ್ದಾಗುವ ಸಾಧ್ಯತೆಯಿದೆ. ಇದನ್ನೂ ಓದಿ: IPL 2023: ಗೆದ್ದು ಪ್ಲೇ ಆಫ್‌ಗೆ ಹಾರಿದ ಚೆನ್ನೈ – ಹೀನಾಯವಾಗಿ ಸೋತು ಆಟ ಮುಗಿಸಿದ ಡೆಲ್ಲಿ ಕ್ಯಾಪಿಟಲ್ಸ್‌

ಭಾನುವಾರ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಕೊನೆಯ ಲೀಗ್ ಪಂದ್ಯ ಇದ್ದು, ಆರ್‌ಸಿಬಿ ಪ್ಲೇ ಆಫ್ ತಲುಪಲು ಈ ಪಂದ್ಯ ನಿರ್ಣಾಯಕವಾಗಿದೆ. ಉತ್ತಮ ರನ್‌ರೇಟ್‌ನೊಂದಿಗೆ 4ನೇ ಸ್ಥಾನ ಖಚಿತಪಡಿಸಿಕೊಂಡಿರುವ ಆರ್‌ಸಿಬಿ ತಂಡಕ್ಕೆ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಒಂದು ವೇಳೆ ಪಂದ್ಯ ಸಂಪೂರ್ಣ ರದ್ದಾದರೆ, ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಸಹ ಸೋಲಬೇಕಾಗುತ್ತದೆ. ಮುಂಬೈ ಇಂಡಿಯನ್ಸ್ ಗೆದ್ದರೆ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಕಳೆದುಕೊಳ್ಳಲಿದೆ.

ಚಿನ್ನಸ್ವಾಮಿ ಅಂಗಳಕ್ಕೆ ಸಮಸ್ಯೆಯಿಲ್ಲ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರೀ ಮಳೆ ಸುರಿದರೆ ಕೇವಲ 7 ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

Share This Article