ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ಬಸ್ ಕೆಟ್ಟು ನಿಂತು ಚಾರ್ಮಾಡಿ ಘಾಟ್ ಟ್ರಾಫಿಕ್ ಜಾಮ್!

Public TV
1 Min Read

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದಾನೆ.

ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದಲೂ ಸುರಿಯುತ್ತಿರೋ ಧಾರಾಕಾರ ಮಳೆಯಿಂದಾಗಿ ಶಾಲಾ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳ ಪರದಾಟ ನಡೆಸಿದ್ದಾರೆ. ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ತೀವ್ರ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಸರ್ಕಾರಿ ಬಸ್ ಕೆಟ್ಟು ನಿಂತ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ. ಕಳೆದೊಂದು ಗಂಟೆಯಿಂದ ವಾಹನ ಸವಾರರು ಟ್ರಾಫಿಕ್ ಜಾಮ್ ನಿಂದ ತೊಂದರೆಗೆ ಸಿಲುಕಿದ್ದಾರೆ. ಮಳೆಯ ನಡುವೆ ಪ್ರಯಾಣಿಕರ ಪರದಾಟ ನಡೆಸಿದ್ದು, ಮಂಗಳೂರಿಗೆ ತಲುಪಲು ಹರಸಾಹಸ ಪಡುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಚಿಕ್ಕಮಗಳೂರಿನಿಂದ ಧರ್ಮಸ್ಥಳ, ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದರಿಂದ ರಸ್ತೆ ಸಂಚಾರ ಬಂದ್ ಆಗಿತ್ತು.

Share This Article
Leave a Comment

Leave a Reply

Your email address will not be published. Required fields are marked *