ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆ ಅಬ್ಬರ – ಮಕ್ಕಳು, ವಾಹನ ಸವಾರರು ಪರದಾಟ

By
0 Min Read

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಕೆಲ ದಿನ ಬಿಡುವು ನೀಡಿದ್ದ ಮಳೆ ಮತ್ತೆ ಇಂದು ಅಬ್ಬರಿಸಿದೆ. ಸಂಜೆಯಾಗುತ್ತಿದ್ದಂತೆ ಗ್ರಾಮೀಣ ಪ್ರದೇಶಗಳಲ್ಲಿ ಭಾರೀ ಹೆಚ್ಚಿನ ಮಳೆಯಾಗಿದೆ.

ಕಡಬ ತಾಲೂಕಿನಾದ್ಯಂತ ಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಪಶ್ಚಿಮ ಘಟ್ಟ ಹಾಗೂ ಸುಬ್ರಮಣ್ಯದ ಕುಮಾರಪರ್ವತದಲ್ಲೂ ಹೆಚ್ಚಿನ ಮಳೆಯಾಗಿದೆ. ಸಂಜೆಯಾಗುತ್ತಿದ್ದಂತೆ ಏಕಾಏಕಿ ಸುಮಾರು ಒಂದು ಗಂಟೆಗಳ ಕಾಲ ನಿರಂತರವಾಗಿ ಮಳೆ ಸುರಿದಿದೆ.

ಕಡಬದ ಹಲವೆಡೆ ರಸ್ತೆಯಲ್ಲೇ ಮಳೆ ನೀರು ಹರಿದು ಶಾಲಾ ಮಕ್ಕಳು, ವಾಹನ ಸವಾರರು ಸಂಚಾರಕ್ಕೆ ಪರದಾಡಿದರು. ಜಿಲ್ಲೆಯ ಇತರೆ ತಾಲೂಕಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.

Share This Article