ಕೊಡಗಿನಲ್ಲಿ ಭಾರೀ ಮಳೆ: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ

Public TV
1 Min Read

ಮಡಿಕೇರಿ: ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕಾವೇರಿ, ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯುತ್ತಿದೆ.

ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದಲ್ಲಿ ಪ್ರವಾಹ ಏರ್ಪಡುವ ಸಾಧ್ಯತೆಗಳಿದೆ. ಕಾವೇರಿಯ ಉಗಮ ಸ್ಥಾನವಾದ ಕಾವೇರಿ ಮತ್ತು ಭಾಗಮಂಡಲ ಕ್ಷೇತ್ರದಲ್ಲಿ ಭಾರೀ ವರ್ಷಾಧಾರೆಯಿಂದ ತ್ರಿವೇಣಿ ಸಂಗಮ ಭರ್ತಿಯಾಗಿದೆ.

ಗಣನೀಯ ಪ್ರಮಾಣದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ಕಾವೇರಿಯ ನೀರು ಸ್ನಾನ ಘಟ್ಟದ ಮೆಟ್ಟಿಲುಗಳನ್ನು ಮೀರಿದೆ. ನಾಪೋಕ್ಲು, ಭಾಗಮಂಡಲ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆಗಳಿವೆ.

ಮಡಿಕೇರಿ ತಾಲೂಕಿನ ಸಂಪಾಜೆ, ಚೆಂಬು, ಕರಿಕೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿದೆ.

https://youtu.be/_17rLEGEkBQ

 

 

Share This Article
Leave a Comment

Leave a Reply

Your email address will not be published. Required fields are marked *