ಕೊಡಗು: ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಹಿನ್ನೆಲೆ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ (ಜೂ.28) ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜ ಅವರು ಆದೇಶಿಸಿದ್ದಾರೆ.
ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದೆ. 80 ವರ್ಷಗಳ ಬಳಿಕ ಜೂನ್ ತಿಂಗಳಲ್ಲಿ ಕೆಆರ್ಎಸ್ (KRS) ಭರ್ತಿ ಆಗುತ್ತಿದ್ದು, ಸೋಮವಾರ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಕೆಆರ್ಎಸ್ಗೆ 50,000 ಕ್ಯೂಸೆಕ್ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಹಾರಂಗಿ ಹಾಗೂ ಹೇಮಾವತಿ ಡ್ಯಾಮ್ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ.ಇದನ್ನೂ ಓದಿ: ಪತ್ನಿಯನ್ನು ಕೊಂದು ಬಸ್ನಲ್ಲಿ ಪಾರ್ಸೆಲ್ – 20 ವರ್ಷ ತಲೆಮರೆಸಿಕೊಂಡಿದ್ದವನಿಗೆ ಜೀವಾವಧಿ ಶಿಕ್ಷೆ
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಅಬ್ಬರದ ಮಳೆಯಾಗ್ತಿದೆ. ಘಟಪ್ರಭಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆಯಾಗಿದೆ. ಘಟಪ್ರಭಾ ನದಿ ಸೇರಿ ಬೆಳಗಾವಿ ಜಿಲ್ಲೆಯ ಸಪ್ತ ನದಿ ತೀರಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಹುಕ್ಕೇರಿ ತಾಲೂಕಿನ ಹುನ್ನೂರು ಗ್ರಾಮದ ವಿಠ್ಠಲ ದೇವಸ್ಥಾನ ಜಲಾವೃತಗೊಂಡಿದೆ. ಹಾವೇರಿಯಲ್ಲಿ ವರದಾ ತುಂಬಿ ಹರಿಯುತ್ತಿದೆ. ಸವಣೂರು ತಾ.ಕಳಸೂರು ಗ್ರಾಮದ ಬಳಿ ಇರೋ ಬ್ರಿಜ್ಡ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿದೆ.
ಹಾಸನದಲ್ಲೂ ಮಳೆ ಆರ್ಭಟ ಮುಂದುವರಿದಿದೆ. ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಸಕಲೇಶಪುರ ತಾಲೂಕಿನ ಐಗೂರು ಗ್ರಾಮದಲ್ಲಿ 300ಕ್ಕೂ ಹೆಚ್ಚು ಎಕರೆ ಪ್ರದೇಶದ ರೈತರ ಜಮೀನುಗಳು ಮುಳುಗಡೆಯಾಗಿದೆ. ಮತ್ತೊಂದೆಡೆ ಐಗೂರು ಗ್ರಾಮದ ಸೇತುವೆ ಕುಸಿದು ಬೀಳುವ ಹಂತ ತಲುಪಿದೆ.ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಸರಿಯಾದ ಕ್ರಮ ಜರುಗಿಸದಕ್ಕೆ ಸಿಎಂ, ಪರಂ ಅಸಮಾಧಾನ