ಕೊಪ್ಪಳದಲ್ಲಿ ಭಾರೀ ಮಳೆ, ರೈತರಿಗೆ ಸಂತಸ

Public TV
0 Min Read

ಕೊಪ್ಪಳ: ಕಳೆದ ಹಲವು ದಿನಗಳಿಂದ ಕೈಕೊಟ್ಟಿದ್ದ ಮಳೆ ಇಂದು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ರೈತರಲ್ಲಿ ಸಂತಸ ಮೂಡಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೂ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಕಳೆದ ಹಲವು ದಿನಗಳಿಂದ ಮಳೆ ಕೈ ಕೊಟ್ಟಿತ್ತು. ಹೀಗಾಗಿ ಎಡಬಿಡದೆ ಸುರಿಯುತ್ತಿರೋ ಮಳೆಯಿಂದ ವಿದ್ಯುತ್ ಸಂಪರ್ಕ ಸಹ ಕಡಿತಗೊಂಡಿದೆ.

ಈ ಎಡಬಿಡದೆ ಸುರಿಯುತ್ತಿರೋ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುರಿಯುತ್ತಿರೋ ಮಳೆಗೆ ಜನರು ಮನೆಯಿಂದ ಹೊರಬಾರದ ಸ್ಥಿತಿಯಲ್ಲಿದ್ದಾರೆ. ಈ ಮಳೆಯಲ್ಲಿಯೇ ಶಿಕ್ಷಕರ ದಿನಾಚರಣೆಯನ್ನ ಜಿಪಂ ಅಧ್ಯಕ್ಷ ರಾಜಶೇಖರ್ ಹಿಟ್ನಾಳ ಅವರು ಮೆರವಣಿಗೆಗೆ ಚಾಲನೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *